‘ಪ್ರತಿ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರಿಂದ ಆಯಾ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಳೆಯಿಂದ ಹಾನಿಗೀಡಾದ ಶಾಲೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಎಲ್ಲಾ ಶಾಲೆಗಳ ಮಾಹಿತಿಯನ್ನು ಕ್ರೋಢೀಕರಿಸಿ, ವರದಿಯೊಂದನ್ನು ಸಿದ್ಧಪಡಿಸಿ, ಅದನ್ನು ದೃಢೀಕರಿಸಿ ನಮ್ಮ ಕಚೇರಿಗೆ ಕಳುಹಿಸಿಕೊಟ್ಟಿದ್ದಾರೆ. ನಾವೂ ಸಹ ಎಲ್ಲಾ ವಲಯದ ವರದಿಗಳನ್ನು ಒಟ್ಟುಗೂಡಿಸಿ, ಸಮಗ್ರ ವರದಿಯನ್ನು ಇಲಾಖೆಯ ಆಯುಕ್ತರಿಗೆ, ಜಿಲ್ಲಾಧಿಕಾರಿಗೆ, ಜಿಲ್ಲಾ ಪಂಚಾಯಿತಿ ಸಿಇಒಗೆ ಶನಿವಾರ ಇ ಮೇಲ್ ಮೂಲಕ ಕಳುಹಿಸಿಕೊಟ್ಟಿದ್ದೇವೆ’ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ.ಪಾಂಡುರಂಗ ‘ಪ್ರಜಾವಾಣಿ’ಗೆ ತಿಳಿಸಿದರು.