ಬಳಿಕ ಅಶ್ವಾರೋಹಿ ಪಡೆಯ ಪ್ರಧಾನ ಕಮಾಂಡೆಂಟ್ ಕೆಎಆರ್ಪಿ ಮೌಂಟೆಂಡ್ ಕಂಪನಿ ತುಕಡಿ ಶಿಸ್ತುಬದ್ಧವಾಗಿ ಸಾಗಿತು. ಅಂಬಾರಿ ಹೊತ್ತ ಅಭಿಮನ್ಯುವಿಗೆ ಕುಮ್ಕಿ ಆನೆಗಳಾದ ವಿಜಯಾ, ಕಾವೇರಿ ಆನೆಗಳು ಸಾಥ್ ನೀಡಿದವು. ಅಂಬಾರಿ ಹಿಂದೆ ಅಶ್ವಾರೋಹಿ ಪಡೆ, ಫಿರಂಗಿ ಗಾಡಿಗಳು, ಅರಣ್ಯ ಇಲಾಖೆ ವೈದ್ಯರ ತಂಡ, ಅಗ್ನಿಶಾಮಕ ತಂಡ ಹಾಗೂ ತುರ್ತುಚಿಕಿತ್ಸಾ ವಾಹನ ಸಾಗಿದವು.