ಮೈಸೂರು: ‘2020ರ ಮಾರ್ಚ್ನಿಂದ 2021ರ ಮಾರ್ಚ್ ಅವಧಿಯಲ್ಲಿ ಶೇ 10ರಷ್ಟು ಕೃಷಿ ಉತ್ಪನ್ನ ಹೆಚ್ಚಳವಾಗಿದೆ. ಆದರೆ ಕೋವಿಡ್ನಿಂದಾಗಿ ಸಕಾಲಕ್ಕೆ ಕೊಯ್ಲು, ಮಾರಾಟ ಮಾಡಲಾಗದೆ ರಾಷ್ಟ್ರಮಟ್ಟದಲ್ಲಿ ಹಿಂಗಾರು ಹಂಗಾಮಿನಲ್ಲೇ ಅಂದಾಜು ₹ 50 ಸಾವಿರ ಕೋಟಿಯಷ್ಟು ಮೌಲ್ಯದ ಕೃಷಿ ಉತ್ಪನ್ನ ಹಾಳಾಗಿದೆ’ ಎಂದು ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಟಿ.ಎನ್.ಪ್ರಕಾಶ್ ಕಮ್ಮರಡಿ ಶನಿವಾರ ಇಲ್ಲಿ ತಿಳಿಸಿದರು.