ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಿಂದ ಮೈಸೂರು ಜಿಲ್ಲೆಯಲ್ಲಿ 500 ಹೆಕ್ಟೇರ್‌ ಬೆಳೆ ನಾಶ: ಸೋಮಶೇಖರ್‌

Last Updated 20 ನವೆಂಬರ್ 2021, 8:38 IST
ಅಕ್ಷರ ಗಾತ್ರ

ಮೈಸೂರು: ಸತತ ಮಳೆಯಿಂದ ಮೈಸೂರು ಜಿಲ್ಲೆಯಲ್ಲಿ ಇದುವರೆಗೆ 500 ಹೆಕ್ಟೇರ್‌ ಬೆಳೆ ನಾಶವಾಗಿದ್ದು, ಮೂವರು ಮೃತರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘1,907 ಮನೆಗಳಿಗೆ ಭಾಗಶಃ ಹಾನಿ ಉಂಟಾಗಿದೆ. 87 ಮನೆಗಳಿಗೆ ಸಂಪೂರ್ಣ ಹಾನಿ ಆಗಿದೆ. ಗ್ರಾಮಾಂತರ ಪ್ರದೇಶದಲ್ಲಿ 500 ಕಿ.ಮೀ., ನಗರ ಪ್ರದೇಶದಲ್ಲಿ 1,100 ಕಿ.ಮೀ. ರಸ್ತೆ ಹಾಳಾಗಿವೆ. 67 ಶಾಲಾ ಕಟ್ಟಡ, 33 ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಕಟ್ಟಡಗಳಿಗೆ ಹಾನಿ ಉಂಟಾಗಿದೆ. 130 ವಿದ್ಯುತ್‌ ಕಂಬಗಳು ಬಿದ್ದಿವೆ’ ಎಂದು ಮಾಹಿತಿ ನೀಡಿದರು.

ಚಾಮುಂಡಿಬೆಟ್ಟದಲ್ಲಿ ಉಂಟಾಗಿರುವ ರಸ್ತೆ ಕುಸಿತದ ಕಾಮಗಾರಿಯನ್ನು ₹ 9.5 ಕೋಟಿ ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಮಳೆ ನಿಂತ ಮೇಲೆ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

‘ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮಾಹಿತಿ ರವಾನಿಸಲಾಗಿದೆ. ಮುಖ್ಯಮಂತ್ರಿ ಕೂಡ ನೇರವಾಗಿ ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದಿದ್ದಾರೆ. ಭಾನುವಾರ ಬಸವರಾಜ ಬೊಮ್ಮಾಯಿ ಕೊಡಗು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ವಿಶೇಷ ಅನುದಾನಕ್ಕೆ ಮನವಿ ಮಾಡುತ್ತೇನೆ. ಸದ್ಯದಲ್ಲೇ ಬೆಳೆ ನಷ್ಟ ಪರಿಹಾರವನ್ನೂ ನೀಡಲಿದ್ದಾರೆ. ಶಿಥಿಲಗೊಂಡ ಕಟ್ಟಡಗಳ ಸಮೀಕ್ಷೆ ನಡೆಸಿ ಮಾಹಿತಿ ಸಲ್ಲಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT