ದೊಡ್ಡ ಆಸ್ಪತ್ರೆಗಳಲ್ಲಿ ಈ ರೀತಿಯ ಶಸ್ತ್ರಚಿಕಿತ್ಸೆಗಳನ್ನು ಮಾಡಲಾಗುತ್ತದೆ. ಆದರೆ, ತಾಲ್ಲೂಕು ಮಟ್ಟದಲ್ಲಿ ಮಾಡಿರುವುದು ಕಡಿಮೆ. ಮುಖ್ಯ ವೈದ್ಯಾಧಿಕಾರಿ ಡಾ.ಎಂ.ಎಸ್.ನಾಗೇಂದ್ರ ಅವರ ನೇತೃತ್ವದಲ್ಲಿ ಪ್ರಸೂತಿ ತಜ್ಞರಾದ ಡಾ.ಕೆ.ಆರ್.ಚಂದ್ರಕಲಾ, ಡಾ.ಎಸ್.ವೈ.ಭವಾನಿ, ಡಾ.ದಿವ್ಯಾ ಮತ್ತು ಅರಿವಳಿಕೆ ತಜ್ಞರ ತಂಡ ಶಸ್ತ್ರಚಿಕಿತ್ಸೆ ಮೂಲಕ ಗೆಡ್ಡೆ ತೆಗೆದು ಯಶಸ್ವಿಯಾಗಿದೆ.