<p><strong>ಮೈಸೂರು:</strong> ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ಸೇರಿದಂತೆ ಒಟ್ಟು ಆರು ಮಂದಿ ಗುರುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿಯ ಹೆಮ್ಮಿಗೆ-ಬಿ ಗ್ರಾಮದ ನಾಲ್ವರು ಬಾಲಕರು ಈಜಲು ಹೋಗಿದ್ದಾಗ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಪ್ರೌಢಶಾಲಾ ವಿದ್ಯಾರ್ಥಿಗಳಾದ ಯಶವಂತ (15), ಮಹದೇವಪ್ರಸಾದ್ (14), ಪರಶಿವಮೂರ್ತಿ (15), ಕಿಶೋರ್ (13) ಮೃತಪಟ್ಟವರು.</p>.<p>ಯಶವಂತ, ಮಹದೇವಪ್ರಸಾದ್ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ ಎಂದು ತಲಕಾಡು ಪೊಲೀಸರು ತಿಳಿಸಿದ್ದಾರೆ. ನದಿ ದಡದಲ್ಲಿ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.</p>.<p>ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಸಮೀಪದ ನಾರ್ತ್ಬ್ಯಾಂಕ್ ಗ್ರಾಮದ ಕಾಳಮ್ಮನ ದೇವಾಲಯಕ್ಕೆ ಗುರುವಾರ ಪೂಜೆಗೆ ಬಂದಿದ್ದ ಹುಣಸೂರು ತಾಲ್ಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ (26), ಸಣ್ಣೇಗೌಡ (34) ವಿಶ್ವೇಶ್ವರಯ್ಯ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ದೇವರ ದರ್ಶನಕ್ಕೂ ಮುನ್ನ ಪಕ್ಕದಲ್ಲೇ ಹರಿಯುತ್ತಿದ್ದ ನಾಲೆಯಲ್ಲಿ ಈಜಲು ಇಳಿದಿದ್ದಾರೆ. ವಿಶ್ವೇಶ್ವರಯ್ಯ ನಾಲೆಯಲ್ಲಿ 2,500 ಕ್ಯೂಸೆಕ್ ನೀರು ಹರಿಯುತ್ತಿದ್ದು, ನೀರಿನ ರಭಸಕ್ಕೆ ತುಸು ದೂರ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು, ಮಂಡ್ಯ ಜಿಲ್ಲೆಯಲ್ಲಿ ಈಜಲು ತೆರಳಿದ್ದ ನಾಲ್ವರು ಬಾಲಕರು ಸೇರಿದಂತೆ ಒಟ್ಟು ಆರು ಮಂದಿ ಗುರುವಾರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿಯ ಹೆಮ್ಮಿಗೆ-ಬಿ ಗ್ರಾಮದ ನಾಲ್ವರು ಬಾಲಕರು ಈಜಲು ಹೋಗಿದ್ದಾಗ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಪ್ರೌಢಶಾಲಾ ವಿದ್ಯಾರ್ಥಿಗಳಾದ ಯಶವಂತ (15), ಮಹದೇವಪ್ರಸಾದ್ (14), ಪರಶಿವಮೂರ್ತಿ (15), ಕಿಶೋರ್ (13) ಮೃತಪಟ್ಟವರು.</p>.<p>ಯಶವಂತ, ಮಹದೇವಪ್ರಸಾದ್ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ ಎಂದು ತಲಕಾಡು ಪೊಲೀಸರು ತಿಳಿಸಿದ್ದಾರೆ. ನದಿ ದಡದಲ್ಲಿ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.</p>.<p>ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಸಮೀಪದ ನಾರ್ತ್ಬ್ಯಾಂಕ್ ಗ್ರಾಮದ ಕಾಳಮ್ಮನ ದೇವಾಲಯಕ್ಕೆ ಗುರುವಾರ ಪೂಜೆಗೆ ಬಂದಿದ್ದ ಹುಣಸೂರು ತಾಲ್ಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ (26), ಸಣ್ಣೇಗೌಡ (34) ವಿಶ್ವೇಶ್ವರಯ್ಯ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ದೇವರ ದರ್ಶನಕ್ಕೂ ಮುನ್ನ ಪಕ್ಕದಲ್ಲೇ ಹರಿಯುತ್ತಿದ್ದ ನಾಲೆಯಲ್ಲಿ ಈಜಲು ಇಳಿದಿದ್ದಾರೆ. ವಿಶ್ವೇಶ್ವರಯ್ಯ ನಾಲೆಯಲ್ಲಿ 2,500 ಕ್ಯೂಸೆಕ್ ನೀರು ಹರಿಯುತ್ತಿದ್ದು, ನೀರಿನ ರಭಸಕ್ಕೆ ತುಸು ದೂರ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>