ಯಶವಂತ, ಮಹದೇವಪ್ರಸಾದ್ ಶವ ಪತ್ತೆಯಾಗಿದ್ದು, ಮತ್ತಿಬ್ಬರ ಶವಕ್ಕಾಗಿ ಶೋಧ ಕಾರ್ಯ ನಡೆದಿದೆ ಎಂದು ತಲಕಾಡು ಪೊಲೀಸರು ತಿಳಿಸಿದ್ದಾರೆ. ನದಿ ದಡದಲ್ಲಿ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿತ್ತು.
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಸಮೀಪದ ನಾರ್ತ್ಬ್ಯಾಂಕ್ ಗ್ರಾಮದ ಕಾಳಮ್ಮನ ದೇವಾಲಯಕ್ಕೆ ಗುರುವಾರ ಪೂಜೆಗೆ ಬಂದಿದ್ದ ಹುಣಸೂರು ತಾಲ್ಲೂಕಿನ ಮಲ್ಲಿನಾಥಪುರ ಗ್ರಾಮದ ಬಸವೇಗೌಡ (26), ಸಣ್ಣೇಗೌಡ (34) ವಿಶ್ವೇಶ್ವರಯ್ಯ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ದೇವರ ದರ್ಶನಕ್ಕೂ ಮುನ್ನ ಪಕ್ಕದಲ್ಲೇ ಹರಿಯುತ್ತಿದ್ದ ನಾಲೆಯಲ್ಲಿ ಈಜಲು ಇಳಿದಿದ್ದಾರೆ. ವಿಶ್ವೇಶ್ವರಯ್ಯ ನಾಲೆಯಲ್ಲಿ 2,500 ಕ್ಯೂಸೆಕ್ ನೀರು ಹರಿಯುತ್ತಿದ್ದು, ನೀರಿನ ರಭಸಕ್ಕೆ ತುಸು ದೂರ ಕೊಚ್ಚಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.