‘ಬುಧವಾರ ರಾತ್ರಿ ಆನೆ ಅರಣ್ಯ ದಾಟುವಾಗ, ಕಾಡಂಚಿನಲ್ಲಿ ಅರಣ್ಯ ಇಲಾಖೆ ಅಳವಡಿಸಿರುವ ತೂಗು ಸೌರಬೇಲಿಗೆ ಸಿಲುಕಿ ಮೃತಪಟ್ಟಿದೆ. ಆನೆಯ ದಂತವನ್ನು ಸಂರಕ್ಷಿಸಲಾಗಿದೆ. ಪಶು ವೈದ್ಯಾಧಿಕಾರಿ ಡಾ.ರಮೇಶ್ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಅಂತ್ಯಸಂಸ್ಕಾರ ಮಾಡಲಾಗಿದೆ’ ಎಂದು ನಾಗರಹೊಳೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ವಿ.ಸತೀಶ್ ತಿಳಿಸಿದರು.