ಹುಣಸೂರು: ‘ಸಚಿವ ಸಾ.ರಾ.ಮಹೇಶ್ ಅವರ ನಡವಳಿಕೆ ರಾಜ್ಯಸರ್ಕಾರದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಆದ್ದರಿಂದ ತಮ್ಮ ನಡವಳಿಕೆ ಬದಲಿಸಿಕೊಳ್ಳುವ ಅಗತ್ಯವಿದೆ. ಏಕೆಂದರೆ ಹಣ, ಅಹಂಕಾರದಿಂದ ಏನನ್ನು ಗಳಿಸಲು ಸಾಧ್ಯವಿಲ್ಲ ಎಂಬುದು ಈ ಲೋಕಸಭೆ ಚುನಾವಣೆಯಲ್ಲಿ ಸಾಬೀತಾಗಿದೆ.ಮತ್ತೊಮ್ಮೆ ಅದೇ ದಾರಿಯಲ್ಲಿ ಹೋದರೆ ಜನತಂತ್ರ ವ್ಯವಸ್ಥೆಯಲ್ಲಿ ಪಾಠ ಕಲಿಯಬೇಕಾಗುತ್ತದೆ’ ಎಂದು ಅಧ್ಯಕ್ಷ ಅಡಗೂರು ಎಚ್. ವಿಶ್ವನಾಥ್ ಗುಡುಗಿದರು.