<p><strong>ಹುಣಸೂರು: </strong>ತಾಲ್ಲೂಕಿನ ಅಯ್ಯನಕೆರೆ ಹಾಡಿಯ ಬಾಲಕನನ್ನು ಕೊಂದ ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನ ವಿವಿಧೆಡೆ 70 ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.</p>.<p>‘ಈ ಹುಲಿ 3ರಿಂದ 4 ವರ್ಷ ಪ್ರಾಯದ್ದಾಗಿದೆ. ಹುಲಿ ಸೆರೆಗಾಗಿ ಗಣೇಶ್, ಭೀಮ ಮತ್ತು ಅರ್ಜುನ ಆನೆಗಳನ್ನು ಬಳಸಿ ಕೂಂಬಿಂಗ್ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆ 5ರಿಂದ 6 ಚದರ ಕಿ.ಮೀ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ 50 ಸಿಬ್ಬಂದಿ ಸೇರಿದಂತೆ ಪಶು ವೈದ್ಯಾಧಿಕಾರಿಗಳ ತಂಡ ನಿತ್ಯ ಗಸ್ತು ನಡೆಸುತ್ತಿದೆ’ ಎಂದು ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದರು.</p>.<p>‘ಹಾಸನದಿಂದ ಅರಿವಳಿಕೆ ತಜ್ಞ ವೆಂಕಟೇಶ್ ಅವರನ್ನು ಕರೆಸಿಕೊಳ್ಳಲಾಗಿದೆ. ಕ್ಯಾಮೆರಾಗಳಲ್ಲಿ ಸೆರೆಯಾಗುವ ಚಿತ್ರಗಳನ್ನು ಆಧರಿಸಿ ಹುಲಿಯ ಚಲನವಲನಗಳ ಮೇಲೆ ನಿಗಾ ವಹಿಸಲಾಗಿದೆ’ ಎಂದರು.</p>.<p>‘ವಯಸ್ಸಾದ ಪ್ರಾಣಿಗಳು ಕಾಡಂಚಿನ ಜನ ಮತ್ತು ಜಾನುವಾರುಗಳ ಮೇಲೆ ದಾಳಿ ನಡೆಸುವುದು ಸಾಮಾನ್ಯ. ಅಂತಹ ಪ್ರಾಣಿಗಳನ್ನು ಸೆರೆ ಹಿಡಿದು ಮೈಸೂರು ಮೃಗಾಲಯದ ವನ್ಯಮೃಗ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸುವ ಆಲೋಚನೆ ಇದೆ’ ಎಂದು ತಿಳಿಸಿದರು.</p>.<p class="Subhead">ಪರಿಹಾರ: ಹುಲಿ ದಾಳಿಗೆ ಬಲಿಯಾದ ಗಣೇಶ್ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ₹7.50 ಲಕ್ಷ ಪರಿಹಾರ ನೀಡಲಾಗುವುದು. ಮೊದಲ ಹಂತದಲ್ಲಿ ₹2 ಲಕ್ಷ ಪರಿಹಾರ ಚೆಕ್ ಅನ್ನು ಶಾಸಕ ಎಚ್.ಪಿ.ಮಂಜುನಾಥ್ ಮೃತನ ಪೋಷಕರಿಗೆ ನೀಡಿದ್ದಾರೆ. ಉಳಿದ ಹಣವನ್ನು ಶೀಘ್ರದಲ್ಲೇ ನೀಡಲಾಗುವುದು’ ಎಂದು ಹೇಳಿದರು.</p>.<p class="Briefhead">ನಾಲ್ಕು ಟ್ರ್ಯಾಪಿಂಗ್ ಕ್ಯಾಮೆರಾ ಕಳವು</p>.<p>ಹನಗೋಡು: ಬಾಲಕನನ್ನು ಕೊಂದ ಹುಲಿ ಪತ್ತೆಗಾಗಿ ಅರಣ್ಯದಲ್ಲಿ ಅಳವಡಿಸಿದ್ದ ನಾಲ್ಕು ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಶುಕ್ರವಾರ ರಾತ್ರಿ ಕಳವು ಮಾಡಲಾಗಿದೆ.</p>.<p>ಶನಿವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಮೇಟಿಕುಪ್ಪೆ ಎಸಿಎಫ್ ಮಹದೇವ್, ಆರ್ಎಫ್ಒ ಹನುಮಂತರಾಜು ಈ ವಿಷಯವನ್ನು ತಿಳಿಸಿದರು.</p>.<p>‘ಕ್ಯಾಮೆರಾಗಳನ್ನು ಕಳವು ಮಾಡಿದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಬಾಲಕನನ್ನು ಕೊಂದ ಸ್ಥಳದಿಂದ 50 ಮೀ. ದೂರದಲ್ಲಿ ಅಳವಡಿಸಿದ್ದ ಕ್ಯಾಮೆರಾ ಸೇರಿದಂತೆ 7 ಕಡೆಗಳಲ್ಲಿ ಮೂರು ಹುಲಿಗಳ ಚಿತ್ರಗಳು ಸೆರೆಯಾಗಿವೆ. ಆದರೆ, ಘಟನೆ ನಡೆದ ದಿನ ಕಾಣಿಸಿಕೊಂಡಿದ್ದ ಹುಲಿಯ ಬೆನ್ನ ಮೇಲೆ ಗಾಯವಾಗಿತ್ತು. ಹೀಗಾಗಿ, ಇವು ಬೇರೆ ಹುಲಿಗಳಾಗಿವೆ’ ಎಂದರು.</p>.<p>‘ಶಿಂಡೇನಹಳ್ಳಿ ಗ್ರಾಮದ ಸುಜೇಂದ್ರ ಎಂಬಾತ ಜಿಂಕೆಯನ್ನು ಬೇಟೆಯಾಡಿದ್ದು, ಆತನನ್ನು ಬಂಧಿಸಲಾಗಿದೆ. 2 ಕೆ.ಜಿ. ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ಹಾಡಿ ಜನರು ಜಾನುವಾರುಗಳನ್ನು ಅರಣ್ಯಕ್ಕೆ ಬಿಡುತ್ತಿದ್ದಾರೆ. ಸೌದೆ ತರುವುದು, ಕಾಡಿನಲ್ಲಿ ಅಡ್ಡಾಡುವುದು ಸಾಮಾನ್ಯವಾಗಿದೆ. ಇದರಿಂದ ಹುಲಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ’ ಎಂದು ಎಸಿಎಫ್ ಸತೀಶ್ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು: </strong>ತಾಲ್ಲೂಕಿನ ಅಯ್ಯನಕೆರೆ ಹಾಡಿಯ ಬಾಲಕನನ್ನು ಕೊಂದ ಹುಲಿ ಸೆರೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಿನ ವಿವಿಧೆಡೆ 70 ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.</p>.<p>‘ಈ ಹುಲಿ 3ರಿಂದ 4 ವರ್ಷ ಪ್ರಾಯದ್ದಾಗಿದೆ. ಹುಲಿ ಸೆರೆಗಾಗಿ ಗಣೇಶ್, ಭೀಮ ಮತ್ತು ಅರ್ಜುನ ಆನೆಗಳನ್ನು ಬಳಸಿ ಕೂಂಬಿಂಗ್ ನಡೆಸಲಾಗುತ್ತಿದೆ. ಈ ಕಾರ್ಯಾಚರಣೆ 5ರಿಂದ 6 ಚದರ ಕಿ.ಮೀ ವ್ಯಾಪ್ತಿಯಲ್ಲಿ ನಡೆದಿದೆ. ಇಲಾಖೆಯ 50 ಸಿಬ್ಬಂದಿ ಸೇರಿದಂತೆ ಪಶು ವೈದ್ಯಾಧಿಕಾರಿಗಳ ತಂಡ ನಿತ್ಯ ಗಸ್ತು ನಡೆಸುತ್ತಿದೆ’ ಎಂದು ಹುಲಿ ಯೋಜನಾ ನಿರ್ದೇಶಕ ಮಹೇಶ್ ಕುಮಾರ್ ತಿಳಿಸಿದರು.</p>.<p>‘ಹಾಸನದಿಂದ ಅರಿವಳಿಕೆ ತಜ್ಞ ವೆಂಕಟೇಶ್ ಅವರನ್ನು ಕರೆಸಿಕೊಳ್ಳಲಾಗಿದೆ. ಕ್ಯಾಮೆರಾಗಳಲ್ಲಿ ಸೆರೆಯಾಗುವ ಚಿತ್ರಗಳನ್ನು ಆಧರಿಸಿ ಹುಲಿಯ ಚಲನವಲನಗಳ ಮೇಲೆ ನಿಗಾ ವಹಿಸಲಾಗಿದೆ’ ಎಂದರು.</p>.<p>‘ವಯಸ್ಸಾದ ಪ್ರಾಣಿಗಳು ಕಾಡಂಚಿನ ಜನ ಮತ್ತು ಜಾನುವಾರುಗಳ ಮೇಲೆ ದಾಳಿ ನಡೆಸುವುದು ಸಾಮಾನ್ಯ. ಅಂತಹ ಪ್ರಾಣಿಗಳನ್ನು ಸೆರೆ ಹಿಡಿದು ಮೈಸೂರು ಮೃಗಾಲಯದ ವನ್ಯಮೃಗ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸುವ ಆಲೋಚನೆ ಇದೆ’ ಎಂದು ತಿಳಿಸಿದರು.</p>.<p class="Subhead">ಪರಿಹಾರ: ಹುಲಿ ದಾಳಿಗೆ ಬಲಿಯಾದ ಗಣೇಶ್ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ₹7.50 ಲಕ್ಷ ಪರಿಹಾರ ನೀಡಲಾಗುವುದು. ಮೊದಲ ಹಂತದಲ್ಲಿ ₹2 ಲಕ್ಷ ಪರಿಹಾರ ಚೆಕ್ ಅನ್ನು ಶಾಸಕ ಎಚ್.ಪಿ.ಮಂಜುನಾಥ್ ಮೃತನ ಪೋಷಕರಿಗೆ ನೀಡಿದ್ದಾರೆ. ಉಳಿದ ಹಣವನ್ನು ಶೀಘ್ರದಲ್ಲೇ ನೀಡಲಾಗುವುದು’ ಎಂದು ಹೇಳಿದರು.</p>.<p class="Briefhead">ನಾಲ್ಕು ಟ್ರ್ಯಾಪಿಂಗ್ ಕ್ಯಾಮೆರಾ ಕಳವು</p>.<p>ಹನಗೋಡು: ಬಾಲಕನನ್ನು ಕೊಂದ ಹುಲಿ ಪತ್ತೆಗಾಗಿ ಅರಣ್ಯದಲ್ಲಿ ಅಳವಡಿಸಿದ್ದ ನಾಲ್ಕು ಟ್ರ್ಯಾಪಿಂಗ್ ಕ್ಯಾಮೆರಾಗಳನ್ನು ಶುಕ್ರವಾರ ರಾತ್ರಿ ಕಳವು ಮಾಡಲಾಗಿದೆ.</p>.<p>ಶನಿವಾರ ಜಂಟಿ ಸುದ್ದಿಗೋಷ್ಠಿ ನಡೆಸಿದ ಮೇಟಿಕುಪ್ಪೆ ಎಸಿಎಫ್ ಮಹದೇವ್, ಆರ್ಎಫ್ಒ ಹನುಮಂತರಾಜು ಈ ವಿಷಯವನ್ನು ತಿಳಿಸಿದರು.</p>.<p>‘ಕ್ಯಾಮೆರಾಗಳನ್ನು ಕಳವು ಮಾಡಿದವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ. ಬಾಲಕನನ್ನು ಕೊಂದ ಸ್ಥಳದಿಂದ 50 ಮೀ. ದೂರದಲ್ಲಿ ಅಳವಡಿಸಿದ್ದ ಕ್ಯಾಮೆರಾ ಸೇರಿದಂತೆ 7 ಕಡೆಗಳಲ್ಲಿ ಮೂರು ಹುಲಿಗಳ ಚಿತ್ರಗಳು ಸೆರೆಯಾಗಿವೆ. ಆದರೆ, ಘಟನೆ ನಡೆದ ದಿನ ಕಾಣಿಸಿಕೊಂಡಿದ್ದ ಹುಲಿಯ ಬೆನ್ನ ಮೇಲೆ ಗಾಯವಾಗಿತ್ತು. ಹೀಗಾಗಿ, ಇವು ಬೇರೆ ಹುಲಿಗಳಾಗಿವೆ’ ಎಂದರು.</p>.<p>‘ಶಿಂಡೇನಹಳ್ಳಿ ಗ್ರಾಮದ ಸುಜೇಂದ್ರ ಎಂಬಾತ ಜಿಂಕೆಯನ್ನು ಬೇಟೆಯಾಡಿದ್ದು, ಆತನನ್ನು ಬಂಧಿಸಲಾಗಿದೆ. 2 ಕೆ.ಜಿ. ಜಿಂಕೆ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>‘ಹಾಡಿ ಜನರು ಜಾನುವಾರುಗಳನ್ನು ಅರಣ್ಯಕ್ಕೆ ಬಿಡುತ್ತಿದ್ದಾರೆ. ಸೌದೆ ತರುವುದು, ಕಾಡಿನಲ್ಲಿ ಅಡ್ಡಾಡುವುದು ಸಾಮಾನ್ಯವಾಗಿದೆ. ಇದರಿಂದ ಹುಲಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ’ ಎಂದು ಎಸಿಎಫ್ ಸತೀಶ್ ಬೇಸರ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>