ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಷಾಢ: ದೇವಿಗೆ ವಿಶೇಷ ಅಲಂಕಾರ

Last Updated 30 ಜೂನ್ 2022, 16:21 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ಕುವೆಂಪುನಗರದ ನ್ಯೂ ಕಾಂತರಾಜ ಅರಸ್ ರಸ್ತೆಯಲ್ಲಿರುವ ಬಂದಂತಮ್ಮ ಮತ್ತು ಕಾಳಮ್ಮ ದೇವಸ್ಥಾನ ಸೇವಾ ಸಮಿತಿಯಿಂದ ದೇವಸ್ಥಾನದಲ್ಲಿ ಆಷಾಢ ಶುಕ್ರವಾರಗಳಂದು ವಿಶೇಷ ಅಲಂಕಾರ ಹಾಗೂ ಪೂಜೆ ಹಮ್ಮಿಕೊಳ್ಳಲಾಗಿದೆ.

ಮೂರ್ತಿಯನ್ನು ಜುಲೈ 1ರಂದು ಕವಡೆ, 8ರಂದು ಬೆಣ್ಣೆ, 15ರಂದು ವರ್ಣ ಹಾಗೂ 22ರಂದು ಹತ್ತಿಯಿಂದ ಅಲಂಕಾರ ಮಾಡಲಾಗುವುದು. ಮಹಾಮಂಗಳಾರತಿ ಮತ್ತು ತೀರ್ಥಪ್ರಸಾದ ವಿತರಣೆ ಬೆಳಿಗ್ಗೆ 8ಕ್ಕೆ ನಡೆಯಲಿದ್ದು, ಸಂಜೆ 5ಕ್ಕೆ ಪ್ರಸಾದ ವಿತರಿಸಲಾಗುವುದು ಎಂದು ಸಮಿತಿಯ ಅಧ್ಯಕ್ಷ ರಾಜಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಿಎಂಎ ಕೋರ್ಸ್‌ಗೆ ಅರ್ಜಿ
ಮೈಸೂರು:
ಭಾರತೀಯ ವೆಚ್ಚ ಲೆಕ್ಕಿಗರ ಸಂಸ್ಥೆ ಮೈಸೂರು ಕೇಂದ್ರವು ಸಿಎಂಎ (ಕಾಸ್ಟ್ ಅಂಡ್ ಮ್ಯಾನೇಜ್‌ಮೆಂಟ್ ಅಕೌಂಟ್ಸ್) ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ಜುಲೈ 31ರೊಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 0821–2331083 ಸಂಪರ್ಕಿಸಬಹುದು ಎಂದು ಅಧ್ಯಕ್ಷ ಆರ್.ಪುರುಷೋತ್ತಮ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಪಿಎ ಕೋರ್ಸ್‌ಗೆ ಅರ್ಜಿ ಆಹ್ವಾನ
ಮೈಸೂರು:
ಮೈಸೂರು ವಿಶ್ವವಿದ್ಯಾಲಯದ ಲಲಿತ ಕಲಾ ಕಾಲೇಜಿನಲ್ಲಿ ಎನ್‌ಇಪಿ–2020 ಅಡಿಯಲ್ಲಿ 2022–23ನೇ ಸಾಲಿನಲ್ಲಿ 3 ವರ್ಷದ ಬಿಪಿಎ ಪದವಿ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 0821–2419586 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT