ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಲ್ಮೀಕಿ ಜಯಂತಿಗೆ ಎಸ್‌.ಟಿ.ಸೋಮಶೇಖರ್‌ ಗೈರು: ಕ್ಷಮೆಯಾಚಿಸಲು ಆಗ್ರಹ

Last Updated 22 ಅಕ್ಟೋಬರ್ 2021, 12:03 IST
ಅಕ್ಷರ ಗಾತ್ರ

ಮೈಸೂರು: ‘ಜಿಲ್ಲಾಡಳಿತ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಗೈರಾಗಿರುವುದು ಖಂಡನೀಯ. ಇದಕ್ಕಾಗಿ ಸಚಿವರು ಕ್ಷಮೆ ಯಾಚಿಸಲೇಬೇಕು’ ಎಂದು ಕೆಪಿಸಿಸಿ ಪರಿಶಿಷ್ಟ ಪಂಗಡದ ಪ್ರಧಾನ ಕಾರ್ಯದರ್ಶಿ ಕ್ಯಾತನಹಳ್ಳಿ ನಾಗರಾಜು ಶುಕ್ರವಾರ ಇಲ್ಲಿ ಆಗ್ರಹಿಸಿದರು.

‘ಸಚಿವರು ಕ್ಷಮೆ ಯಾಚಿಸದಿದ್ದರೇ; ಅವರು ಪಾಲ್ಗೊಳ್ಳುವ ಸಮಾರಂಭಗಳಲ್ಲಿ ಕಪ್ಪುಪಟ್ಟಿ ಪ್ರದರ್ಶಿಸಲಾಗುವುದು’ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಸಿದರು.

‘ಪಕ್ಷಾತೀತವಾಗಿ ವಾಲ್ಮೀಕಿ ಸಮಾಜದ ಮುಖಂಡರು ಈ ವಿಷಯದಲ್ಲಿ ಸಭೆ ನಡೆಸಲಿದ್ದಾರೆ. ಸಚಿವರು ತಕ್ಷಣವೇ ನಮ್ಮ ಆಗ್ರಹಕ್ಕೆ ಸ್ಪಂದಿಸದಿದ್ದರೆ ಪ್ರತಿಭಟನೆ ಅನಿವಾರ್ಯ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT