<p><strong>ತಿ.ನರಸೀಪುರ:</strong> ‘ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ತಮ್ಮ ಎದುರಾಳಿಗಳನ್ನು ಬಗ್ಗು ಬಡಿಯುವ ಹುನ್ನಾರ ನಡೆಸುತ್ತಿದೆ’ ಎಂದು ಮುಖಂಡ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದರು.</p>.<p>ಪಟ್ಟಣದ ಬಣ್ಣಾರಿ ಮಾರಿಯಮ್ಮ ದೇವಾಲಯದ ಪಕ್ಕದಲ್ಲಿ ಶುಕ್ರವಾರ ತಿ.ನರಸೀಪುರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜನರ ಮೇಲೆ ಕಾಳಜಿ ಇಲ್ಲದ ಬಿಜೆಪಿ ಸರ್ಕಾರ ಸುಳ್ಳುಗಳನ್ನು ಹೇಳುತ್ತಿದೆ. ಧರ್ಮ, ಜಾತಿ ಹೆಸರಿನಲ್ಲಿ ಕೋಮುದ್ವೇಷ ಉಂಟುಮಾಡುತ್ತಿದೆ. ಇವರ ಆಡಳಿತದಲ್ಲಿ ಅಲ್ಪಸಂಖ್ಯಾತರು ಆತಂಕದಿಂದ ಬದುಕುವ ವಾತವರಣ ಉಂಟಾಗಿದೆ. ದೇಶದಲ್ಲಿ ಯಾವುದೇ ಜನಪರ ಕಾರ್ಯಗಳು ಆಗುತ್ತಿಲ್ಲ’ ಎಂದು ದೂರಿದರು.</p>.<p>ಬ್ಲಾಕ್ ಅಧ್ಯಕ್ಷ ಎಂ.ಡಿ.ಬಸವರಾಜು, ವರುಣಾ ಶಾಸಕ ಡಾ. ಯತೀಂದ್ರ, ಕೆಪಿಸಿಸಿ ವೀಕ್ಷಕ ಚಿಕ್ಕಮಾದು, ಮುಖಂಡ ಸುನಿಲ್ ಬೋಸ್ ಮಾತನಾಡಿದರು.</p>.<p>ಪುರಸಭಾಧ್ಯಕ್ಷ ಮದನ್ ರಾಜ್, ಬನ್ನೂರು ಬ್ಲಾಕ್ ಅಧ್ಯಕ್ಷ ಚೆನ್ನಕೇಶವ, ಮುಖಂಡರಾದ ರಾಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ‘ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು, ತಮ್ಮ ಎದುರಾಳಿಗಳನ್ನು ಬಗ್ಗು ಬಡಿಯುವ ಹುನ್ನಾರ ನಡೆಸುತ್ತಿದೆ’ ಎಂದು ಮುಖಂಡ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದರು.</p>.<p>ಪಟ್ಟಣದ ಬಣ್ಣಾರಿ ಮಾರಿಯಮ್ಮ ದೇವಾಲಯದ ಪಕ್ಕದಲ್ಲಿ ಶುಕ್ರವಾರ ತಿ.ನರಸೀಪುರ ಹಾಗೂ ವರುಣಾ ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ನೂತನ ಕಚೇರಿ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಜನರ ಮೇಲೆ ಕಾಳಜಿ ಇಲ್ಲದ ಬಿಜೆಪಿ ಸರ್ಕಾರ ಸುಳ್ಳುಗಳನ್ನು ಹೇಳುತ್ತಿದೆ. ಧರ್ಮ, ಜಾತಿ ಹೆಸರಿನಲ್ಲಿ ಕೋಮುದ್ವೇಷ ಉಂಟುಮಾಡುತ್ತಿದೆ. ಇವರ ಆಡಳಿತದಲ್ಲಿ ಅಲ್ಪಸಂಖ್ಯಾತರು ಆತಂಕದಿಂದ ಬದುಕುವ ವಾತವರಣ ಉಂಟಾಗಿದೆ. ದೇಶದಲ್ಲಿ ಯಾವುದೇ ಜನಪರ ಕಾರ್ಯಗಳು ಆಗುತ್ತಿಲ್ಲ’ ಎಂದು ದೂರಿದರು.</p>.<p>ಬ್ಲಾಕ್ ಅಧ್ಯಕ್ಷ ಎಂ.ಡಿ.ಬಸವರಾಜು, ವರುಣಾ ಶಾಸಕ ಡಾ. ಯತೀಂದ್ರ, ಕೆಪಿಸಿಸಿ ವೀಕ್ಷಕ ಚಿಕ್ಕಮಾದು, ಮುಖಂಡ ಸುನಿಲ್ ಬೋಸ್ ಮಾತನಾಡಿದರು.</p>.<p>ಪುರಸಭಾಧ್ಯಕ್ಷ ಮದನ್ ರಾಜ್, ಬನ್ನೂರು ಬ್ಲಾಕ್ ಅಧ್ಯಕ್ಷ ಚೆನ್ನಕೇಶವ, ಮುಖಂಡರಾದ ರಾಧಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>