ಮೈಸೂರು: ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್ಯು) ಆವರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸಂಘಟನೆಗೆ ಸೇರಿದ ಸದಸ್ಯರ ಮೇಲೆ ಕೆಲವರು ಹಲ್ಲೆ ನಡೆಸಿದಾಗ, ಆತ್ಮರಕ್ಷಣೆಗಾಗಿ ಆಯುಧಗಳನ್ನು ಅವರು ಹಿಡಿದಿರಬಹುದು. ಆದರೆ, ಮುಖಗವಸು ಹಾಕಿಕೊಂಡು ಹಲ್ಲೆ ನಡೆಸಿದವರು ಎಬಿವಿಪಿ ಸದಸ್ಯರಲ್ಲ ಎಂದು ಎಬಿವಿಪಿ ರಾಷ್ಟ್ರೀಯ ಕಾರ್ಯದರ್ಶಿ ಹರ್ಷ ನಾರಾಯಣ್ ತಿಳಿಸಿದರು.