<p><strong>ಮೈಸೂರು: </strong>ಮಾದಕ ವಸ್ತುವಿನ ನಶಾಮುಕ್ತ ಭಾರತಕ್ಕಾಗಿ ಇಲ್ಲಿನ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂದೆ ಸಹಿಸಂಗ್ರಹ ಅಭಿಯಾನವನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಬುಧವಾರ ನಡೆಸಿದರು.</p>.<p>ಇದರ ಜತೆಗೆ, ಮನ್ನಾಸ್ ಮಾರುಕಟ್ಟೆಯಲ್ಲೂ ಸಹಿಸಂಗ್ರಹದ ಫಲಕವನ್ನು ಇರಿಸಲಾಗಿದ್ದು, ಒಟ್ಟು 500ಕ್ಕೂ ಅಧಿಕ ಮಂದಿ ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಕೈ ಜೋಡಿಸಿದರು.</p>.<p>ಮಾದಕವಸ್ತು ಜಾಲದಲ್ಲಿ ಪ್ರಭಾವಿಗಳು, ಸಿನಿಮಾ ನಟ, ನಟಿಯರ ಹೆಸರು ಕೇಳಿ ಬರುತ್ತಿದೆ. ಮತ್ತಷ್ಟು ಮಂದಿ ಭಾಗಿಯಾಗಿರುವ ಶಂಕೆಯೂ ಮೂಡಿದೆ. ನಿಜಕ್ಕೂ ಇದೊಂದು ಘೋರ ದುರಂತ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸರ್ಕಾರ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು. ಈ ಜಾಲದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>‘ಮಾದಕವಸ್ತುಗಳ ಜಾಲವನ್ನು ವಿಸ್ತರಿಸುವ ಮೂಲಕ ವಿದೇಶಗಳು ನಮ್ಮ ಮೇಲೆ ಬಾಂಬ್ ಹಾಕುತ್ತಿವೆ. ಮಾದಕವಸ್ತುಗಳ ವಿಷವರ್ತುಲದಲ್ಲಿ ಸಿಲುಕುವ ಯುವಜನತೆ ನಿಷ್ಕ್ರಿಯವಾಗುತ್ತಾರೆ. ಅವರ ಕುಟುಂಬ ಬೀದಿ ಪಾಲಾಗುತ್ತದೆ. ಈ ಮೂಲಕ ರಾಷ್ಟ್ರದ ಉತ್ಪಾದಕತೆ ಮತ್ತು ಆರ್ಥಿಕತೆಗೆ ದೊಡ್ಡ ಹೊಡೆತ ನೀಡುವುದು ಇದರ ಉದ್ದೇಶ. ಇದನ್ನು ಯುವಜನರು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಅವರಿಗೆ ಮಾದಕವಸ್ತುಗಳ ವ್ಯಸನದಿಂದ ಆಗುವ ದುಷ್ಪರಿಣಾಮಗಳನ್ನು ಕುರಿತು ಮಾಹಿತಿ ನೀಡಬೇಕು. ಶಾಲಾ, ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಒಂದು ವೇಳೆ ಸಾರ್ವಜನಿಕರಿಗೆ ಮಾದಕವಸ್ತುಗಳ ಮಾರಾಟ ಕುರಿತು ಮಾಹಿತಿ ದೊರೆತರೆ ಕೂಡಲೇ ಪೊಲೀಸರಿಗೆ ನೀಡಬೇಕು ಎಂದು ಅವರು ಮನವಿ ಮಾಡಿದರು.</p>.<p>ಸಂಘಟನೆಯ ಜಿಲ್ಲಾ ಪ್ರಮುಖರಾದ ರಾಮದಾಸರೆಡ್ಡಿ, ಜಿಲ್ಲಾ ಸಂಚಾಲಕರಾದ ಗೌತಮ್, ನಗರ ಸಂಘಟನಾ ಕಾರ್ಯದರ್ಶಿ ಶರತ್, ನಗರ ಸಹಕಾರ್ಯದರ್ಶಿಗಳಾದ ಪ್ರಜ್ಞಾ, ನಾಗಶ್ರೀ, ಚಿರಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮಾದಕ ವಸ್ತುವಿನ ನಶಾಮುಕ್ತ ಭಾರತಕ್ಕಾಗಿ ಇಲ್ಲಿನ ಮೈಸೂರು ಗ್ರಾಮಾಂತರ ಬಸ್ ನಿಲ್ದಾಣದ ಮುಂದೆ ಸಹಿಸಂಗ್ರಹ ಅಭಿಯಾನವನ್ನು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಕಾರ್ಯಕರ್ತರು ಬುಧವಾರ ನಡೆಸಿದರು.</p>.<p>ಇದರ ಜತೆಗೆ, ಮನ್ನಾಸ್ ಮಾರುಕಟ್ಟೆಯಲ್ಲೂ ಸಹಿಸಂಗ್ರಹದ ಫಲಕವನ್ನು ಇರಿಸಲಾಗಿದ್ದು, ಒಟ್ಟು 500ಕ್ಕೂ ಅಧಿಕ ಮಂದಿ ಸಹಿ ಹಾಕುವ ಮೂಲಕ ಅಭಿಯಾನಕ್ಕೆ ಕೈ ಜೋಡಿಸಿದರು.</p>.<p>ಮಾದಕವಸ್ತು ಜಾಲದಲ್ಲಿ ಪ್ರಭಾವಿಗಳು, ಸಿನಿಮಾ ನಟ, ನಟಿಯರ ಹೆಸರು ಕೇಳಿ ಬರುತ್ತಿದೆ. ಮತ್ತಷ್ಟು ಮಂದಿ ಭಾಗಿಯಾಗಿರುವ ಶಂಕೆಯೂ ಮೂಡಿದೆ. ನಿಜಕ್ಕೂ ಇದೊಂದು ಘೋರ ದುರಂತ ಎಂದು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಸರ್ಕಾರ ಕೂಡಲೇ ಉನ್ನತಮಟ್ಟದ ತನಿಖೆ ನಡೆಸಬೇಕು. ಈ ಜಾಲದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>‘ಮಾದಕವಸ್ತುಗಳ ಜಾಲವನ್ನು ವಿಸ್ತರಿಸುವ ಮೂಲಕ ವಿದೇಶಗಳು ನಮ್ಮ ಮೇಲೆ ಬಾಂಬ್ ಹಾಕುತ್ತಿವೆ. ಮಾದಕವಸ್ತುಗಳ ವಿಷವರ್ತುಲದಲ್ಲಿ ಸಿಲುಕುವ ಯುವಜನತೆ ನಿಷ್ಕ್ರಿಯವಾಗುತ್ತಾರೆ. ಅವರ ಕುಟುಂಬ ಬೀದಿ ಪಾಲಾಗುತ್ತದೆ. ಈ ಮೂಲಕ ರಾಷ್ಟ್ರದ ಉತ್ಪಾದಕತೆ ಮತ್ತು ಆರ್ಥಿಕತೆಗೆ ದೊಡ್ಡ ಹೊಡೆತ ನೀಡುವುದು ಇದರ ಉದ್ದೇಶ. ಇದನ್ನು ಯುವಜನರು ಅರ್ಥ ಮಾಡಿಕೊಳ್ಳಬೇಕು’ ಎಂದರು.</p>.<p>ಪೋಷಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾ ವಹಿಸಬೇಕು. ಅವರಿಗೆ ಮಾದಕವಸ್ತುಗಳ ವ್ಯಸನದಿಂದ ಆಗುವ ದುಷ್ಪರಿಣಾಮಗಳನ್ನು ಕುರಿತು ಮಾಹಿತಿ ನೀಡಬೇಕು. ಶಾಲಾ, ಕಾಲೇಜುಗಳಲ್ಲಿ ಜಾಗೃತಿ ಮೂಡಿಸಬೇಕು ಎಂದು ಅವರು ಒತ್ತಾಯಿಸಿದರು.</p>.<p>ಒಂದು ವೇಳೆ ಸಾರ್ವಜನಿಕರಿಗೆ ಮಾದಕವಸ್ತುಗಳ ಮಾರಾಟ ಕುರಿತು ಮಾಹಿತಿ ದೊರೆತರೆ ಕೂಡಲೇ ಪೊಲೀಸರಿಗೆ ನೀಡಬೇಕು ಎಂದು ಅವರು ಮನವಿ ಮಾಡಿದರು.</p>.<p>ಸಂಘಟನೆಯ ಜಿಲ್ಲಾ ಪ್ರಮುಖರಾದ ರಾಮದಾಸರೆಡ್ಡಿ, ಜಿಲ್ಲಾ ಸಂಚಾಲಕರಾದ ಗೌತಮ್, ನಗರ ಸಂಘಟನಾ ಕಾರ್ಯದರ್ಶಿ ಶರತ್, ನಗರ ಸಹಕಾರ್ಯದರ್ಶಿಗಳಾದ ಪ್ರಜ್ಞಾ, ನಾಗಶ್ರೀ, ಚಿರಂತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>