<p><strong>ಮೈಸೂರು: </strong>ಇಲ್ಲಿನ ಹೂಟಗಳ್ಳಿಯ ಕೆಆರ್ಎಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಆಟೊವೊಂದು ಗೋಬಿ ಮಂಚೂರಿ ಮಾರಾಟ ಮಾಡುತ್ತಿದ್ದ ಗಾಡಿಗೆ ಡಿಕ್ಕಿ ಹೊಡೆದಿದೆ. ಇದರಿಂದ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೆಚ್ಚಿನವರಿಗೆ ಕುದಿಯುತ್ತಿದ್ದ ಎಣ್ಣೆ ಮೈಮೇಲೆ ಬಿದ್ದು ಸುಟ್ಟ ಗಾಯಗಳಾಗಿವೆ. ಜತೆಗೆ, 2 ದ್ವಿಚಕ್ರ ವಾಹನ ಸವಾರರಿಗೂ ಗಾಯಗಳಾಗಿವೆ.</p>.<p>ಆಟೊದಲ್ಲಿ ಗಾರ್ಮೆಟ್ಸ್ವೊಂದರ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅತಿ ವೇಗದಲ್ಲಿ ಬಂದ ಚಾಲಕ ರಸ್ತೆ ಬದಿಯ ಗಾಡಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ, 2 ದ್ವಿಚಕ್ರ ವಾಹನಗಳಿಗೂ ಡಿಕ್ಕಿಯಾಗಿದೆ.</p>.<p>ಅಪಘಾತದಲ್ಲಿ ಬಾಲಕಿ ಶ್ವೇತಾ ಎಂಬುವವರಿಗೆ ತೀವ್ರತರವಾದ ಗಾಯವಾಗಿವೆ. ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆ ಹಾಗೂ ಹೂಟಗಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿ.ವಿ.ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಹೇಶ್, ಅಶೋಕ, ಲೋಕೇಶ್, ಶ್ವೇತಾ, ಕಾಂತರಾಜು, ರಂಜಿತಾ, ಜ್ಯೋತಿ, ರಜನಿ, ಕಮಲಾ, ಹಸೀನಾ ಬಾನು, ಹಜಿರಾ ಬೇಗಂ, ಪವಿತ್ರಾ, ಮೀನಾ, ರೋಜಾ, ನಂದಾ ಹಾಗೂ ಇತರರು ಗಾಯಗೊಂಡವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಇಲ್ಲಿನ ಹೂಟಗಳ್ಳಿಯ ಕೆಆರ್ಎಸ್ ರಸ್ತೆಯಲ್ಲಿ ಸೋಮವಾರ ರಾತ್ರಿ ಚಾಲಕನ ನಿಯಂತ್ರಣ ತಪ್ಪಿದ ಆಟೊವೊಂದು ಗೋಬಿ ಮಂಚೂರಿ ಮಾರಾಟ ಮಾಡುತ್ತಿದ್ದ ಗಾಡಿಗೆ ಡಿಕ್ಕಿ ಹೊಡೆದಿದೆ. ಇದರಿಂದ 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೆಚ್ಚಿನವರಿಗೆ ಕುದಿಯುತ್ತಿದ್ದ ಎಣ್ಣೆ ಮೈಮೇಲೆ ಬಿದ್ದು ಸುಟ್ಟ ಗಾಯಗಳಾಗಿವೆ. ಜತೆಗೆ, 2 ದ್ವಿಚಕ್ರ ವಾಹನ ಸವಾರರಿಗೂ ಗಾಯಗಳಾಗಿವೆ.</p>.<p>ಆಟೊದಲ್ಲಿ ಗಾರ್ಮೆಟ್ಸ್ವೊಂದರ ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಅತಿ ವೇಗದಲ್ಲಿ ಬಂದ ಚಾಲಕ ರಸ್ತೆ ಬದಿಯ ಗಾಡಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ, 2 ದ್ವಿಚಕ್ರ ವಾಹನಗಳಿಗೂ ಡಿಕ್ಕಿಯಾಗಿದೆ.</p>.<p>ಅಪಘಾತದಲ್ಲಿ ಬಾಲಕಿ ಶ್ವೇತಾ ಎಂಬುವವರಿಗೆ ತೀವ್ರತರವಾದ ಗಾಯವಾಗಿವೆ. ಗಾಯಾಳುಗಳನ್ನು ಕೆ.ಆರ್.ಆಸ್ಪತ್ರೆ ಹಾಗೂ ಹೂಟಗಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ವಿ.ವಿ.ಪುರಂ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಮಹೇಶ್, ಅಶೋಕ, ಲೋಕೇಶ್, ಶ್ವೇತಾ, ಕಾಂತರಾಜು, ರಂಜಿತಾ, ಜ್ಯೋತಿ, ರಜನಿ, ಕಮಲಾ, ಹಸೀನಾ ಬಾನು, ಹಜಿರಾ ಬೇಗಂ, ಪವಿತ್ರಾ, ಮೀನಾ, ರೋಜಾ, ನಂದಾ ಹಾಗೂ ಇತರರು ಗಾಯಗೊಂಡವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>