ಇವರು ಪೆಟ್ರೊಲ್ ಬಂಕ್ ಸಮೀಪದಿಂದ ಗುಂಡೂರಾವ್ನಗರಕ್ಕೆ ರಸ್ತೆ ದಾಟುತ್ತಿದ್ದಾಗ ಮೈಸೂರಿನಿಂದ ನಂಜನಗೂಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ನಂತರ, ಇವರ ಮೇಲೆ ಬಸ್ ಸಂಪೂರ್ಣ ಹರಿದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಇವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೆ.ಆರ್.ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.