<p><strong>ಮೈಸೂರು:</strong> ಜಿಲ್ಲೆಯಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಅಪಘಾತದಲ್ಲಿ ಮೂವರು ಮಹಿಳೆಯರೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.</p>.<p>ಮೈಸೂರು- ಮಾನಂದವಾಡಿ ಮುಖ್ಯರಸ್ತೆಯ ಜಯಪುರ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ.</p>.<p>ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿಗಳಾದ ಮಹೇಶ್ (27) ಹಾಗೂ ಅನುಷಾ (25) ಸ್ಥಳದಲ್ಲೇ ಮೃತಪಟ್ಟವರು. ಅನೂಪ್ (25) ಗಾಯಗೊಂಡವರು.</p>.<p>ಇವರು ಮೂವರೂ ಪರಸ್ಪರ ಸ್ನೇಹಿತರಾಗಿದ್ದು, ಎಚ್.ಡಿ.ಕೋಟೆ ಕಡೆಗೆ ಬಂದಿದ್ದರು. ವಾಪಸ್ ಮೈಸೂರು ಕಡೆಗೆ ತೆರಳುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.</p>.<p>ಅಪಘಾತ ನಡೆದ ಸ್ಥಳಕ್ಕೆ ಡಿವೈಎಸ್ಪಿ ಡಾ.ಸುಮೀತ್, ಜಯಪುರ ಪಿಎಸ್ಐ ಕೆ.ಸಿ.ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಮಗುಚಿ ಬಿದ್ದ ಆಟೊ; ಮಹಿಳೆ ಸಾವು<br />ಜಯಪುರ: </strong>ಇಲ್ಲಿಗೆ ಸಮೀಪದ ದಾರಿಪುರ ಗ್ರಾಮದ ಬಳಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಸರಕು ಸಾಗಣೆ ಆಟೊವೊಂದು ಮಗುಚಿ ಬಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.<p>ಉದ್ಬೂರು ನಿವಾಸಿ ಚಂದ್ರಮ್ಮ (60) ಮೃತಪಟ್ಟವರು. ಇವರು ಇತರೆ 20 ಮಹಿಳೆಯರೊಂದಿಗೆ ಕೂಲಿ ಕೆಲಸಕ್ಕೆ ತೆರಳಿದ್ದರು. ವಾಪಸ್ ಊರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಆಟೊ ಮಗುಚಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಬಸ್ ಹರಿದು ಮಹಿಳೆ ಸಾವು<br />ಮೈಸೂರು: </strong>ಇಲ್ಲಿನ ಪಡುವಾರಹಳ್ಳಿ ಜಂಕ್ಷನ್ ಸಮೀಪ ಹುಣಸೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದರಿಂದ ಶ್ವೇತಾ ಎಂಬುವವರು ಮೃತಪಟ್ಟಿದ್ದಾರೆ.</p>.<p>ಬಸ್ನ ಚಕ್ರವು ಇವರ ಮೇಲೆ ಹರಿದು ತೀವ್ರ ರಕ್ತಸ್ರಾವ ಉಂಟಾಯಿತು. ಇವರು ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿ.ವಿ ಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p class="Briefhead"><strong>ಆತ್ಮಹತ್ಯೆ<br />ಮೈಸೂರು: </strong>ಇಲ್ಲಿನ ರಾಜರಾಜೇಶ್ವರಿ ನಗರದ ನಿವಾಸಿ ಮದನ್ (24) ಎಂಬಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಟ್ಟೆನೋವಿನಿಂದ ಬೇಸರಗೊಂಡು ಈತ ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯಲ್ಲಿ ಮಂಗಳವಾರ ನಡೆದ ಪ್ರತ್ಯೇಕ ಅಪಘಾತದಲ್ಲಿ ಮೂವರು ಮಹಿಳೆಯರೂ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ.</p>.<p>ಮೈಸೂರು- ಮಾನಂದವಾಡಿ ಮುಖ್ಯರಸ್ತೆಯ ಜಯಪುರ ಸಮೀಪ ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ.</p>.<p>ಮೈಸೂರಿನ ವಿದ್ಯಾರಣ್ಯಪುರಂ ನಿವಾಸಿಗಳಾದ ಮಹೇಶ್ (27) ಹಾಗೂ ಅನುಷಾ (25) ಸ್ಥಳದಲ್ಲೇ ಮೃತಪಟ್ಟವರು. ಅನೂಪ್ (25) ಗಾಯಗೊಂಡವರು.</p>.<p>ಇವರು ಮೂವರೂ ಪರಸ್ಪರ ಸ್ನೇಹಿತರಾಗಿದ್ದು, ಎಚ್.ಡಿ.ಕೋಟೆ ಕಡೆಗೆ ಬಂದಿದ್ದರು. ವಾಪಸ್ ಮೈಸೂರು ಕಡೆಗೆ ತೆರಳುವಾಗ ಕಾರು ಚಾಲಕನ ನಿಯಂತ್ರಣ ತಪ್ಪಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.</p>.<p>ಅಪಘಾತ ನಡೆದ ಸ್ಥಳಕ್ಕೆ ಡಿವೈಎಸ್ಪಿ ಡಾ.ಸುಮೀತ್, ಜಯಪುರ ಪಿಎಸ್ಐ ಕೆ.ಸಿ.ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಮಗುಚಿ ಬಿದ್ದ ಆಟೊ; ಮಹಿಳೆ ಸಾವು<br />ಜಯಪುರ: </strong>ಇಲ್ಲಿಗೆ ಸಮೀಪದ ದಾರಿಪುರ ಗ್ರಾಮದ ಬಳಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಸರಕು ಸಾಗಣೆ ಆಟೊವೊಂದು ಮಗುಚಿ ಬಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.</p>.<p>ಉದ್ಬೂರು ನಿವಾಸಿ ಚಂದ್ರಮ್ಮ (60) ಮೃತಪಟ್ಟವರು. ಇವರು ಇತರೆ 20 ಮಹಿಳೆಯರೊಂದಿಗೆ ಕೂಲಿ ಕೆಲಸಕ್ಕೆ ತೆರಳಿದ್ದರು. ವಾಪಸ್ ಊರಿಗೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿದ ಆಟೊ ಮಗುಚಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ಬಸ್ ಹರಿದು ಮಹಿಳೆ ಸಾವು<br />ಮೈಸೂರು: </strong>ಇಲ್ಲಿನ ಪಡುವಾರಹಳ್ಳಿ ಜಂಕ್ಷನ್ ಸಮೀಪ ಹುಣಸೂರು ರಸ್ತೆಯಲ್ಲಿ ಕೆಎಸ್ಆರ್ಟಿಸಿ ಬಸ್ವೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದರಿಂದ ಶ್ವೇತಾ ಎಂಬುವವರು ಮೃತಪಟ್ಟಿದ್ದಾರೆ.</p>.<p>ಬಸ್ನ ಚಕ್ರವು ಇವರ ಮೇಲೆ ಹರಿದು ತೀವ್ರ ರಕ್ತಸ್ರಾವ ಉಂಟಾಯಿತು. ಇವರು ಆಸ್ಪತ್ರೆಗೆ ಸಾಗಿಸುವಾಗ ಸಾವಿಗೀಡಾದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ವಿ.ವಿ ಪುರಂ ಠಾಣೆಯಲ್ಲಿ ದಾಖಲಾಗಿದೆ.</p>.<p class="Briefhead"><strong>ಆತ್ಮಹತ್ಯೆ<br />ಮೈಸೂರು: </strong>ಇಲ್ಲಿನ ರಾಜರಾಜೇಶ್ವರಿ ನಗರದ ನಿವಾಸಿ ಮದನ್ (24) ಎಂಬಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೊಟ್ಟೆನೋವಿನಿಂದ ಬೇಸರಗೊಂಡು ಈತ ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>