‘ಸಂಚಾರ ಪೊಲೀಸರು ಘಟನೆ ನಡೆದ ಸ್ಥಳದಿಂದ ಸುಮಾರು 200 ಮೀಟರ್ ದೂರದಲ್ಲಿದ್ದರು. ಇವರನ್ನು ನೋಡಿ ಗಾಬರಿಗೊಂಡ ಸವಾರ, ತಮ್ಮ ವಾಹನವನ್ನು ‘ಯುಟರ್ನ್’ ಮಾಡುವ ವೇಳೆ ಲಾರಿಗೆ ಸಿಲುಕಿ ಮೃತಪಟ್ಟಿದ್ದಾರೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಉದ್ರಿಕ್ತರು ಹಲ್ಲೆ ನಡೆಸಿದ್ದರಿಂದ ಇಬ್ಬರು ಪೊಲೀಸರಿಗೆ ಗಾಯಗಳಾಗಿವೆ. ‘ಗರುಡ’ ವಾಹನ ನಜ್ಜುಗುಜ್ಜಾಗಿದೆ’ ಎಂದು ಡಿಸಿಪಿ ಗೀತಾ ಪ್ರಸನ್ನ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.