ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಯಗೊಂಡಿದ್ದ ಯುವಕ ಸಾವು

ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್‌
Last Updated 21 ಅಕ್ಟೋಬರ್ 2018, 19:23 IST
ಅಕ್ಷರ ಗಾತ್ರ

ಎಚ್.ಡಿ.ಕೋಟೆ: ಮೈಸೂರಿನ ಆಲನಹಳ್ಳಿ ವೃತ್ತದಲ್ಲಿ ವಾರದ ಹಿಂದೆ ಬೈಕ್‌ನಿಂದ ಬಿದ್ದು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಪಟ್ಟಣದ ವಿದ್ಯಾನಗರ ನಿವಾಸಿ ಗಿರೀಶ್ (27) ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

ಮೈಸೂರಿನ ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್‌, ಅಕ್ಟೋಬರ್‌ 15ರಂದು ಆಲನಹಳ್ಳಿ ವೃತ್ತದ ಬಳಿ ಅಪಾಚಿ ಬೈಕ್‍ನಲ್ಲಿ ಹೋಗುತ್ತಿದ್ದ ವೇಳೆ ಬೈಕ್‌ನಿಂದ ಬಿದ್ದಿದ್ದರು. ಅವರ ತಲೆ ಮತ್ತು ಹೃದಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿತ್ತು. ಗಾಯಾಳುವನ್ನು ಪೊಲೀಸರು ಬೃಂದಾವನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT