ಮೈಸೂರಿನ ಆ್ಯಕ್ಸಿಸ್ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದ ಗಿರೀಶ್, ಅಕ್ಟೋಬರ್ 15ರಂದು ಆಲನಹಳ್ಳಿ ವೃತ್ತದ ಬಳಿ ಅಪಾಚಿ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಬೈಕ್ನಿಂದ ಬಿದ್ದಿದ್ದರು. ಅವರ ತಲೆ ಮತ್ತು ಹೃದಯ ಭಾಗಕ್ಕೆ ಬಲವಾದ ಪೆಟ್ಟು ಬಿದ್ದಿತ್ತು. ಗಾಯಾಳುವನ್ನು ಪೊಲೀಸರು ಬೃಂದಾವನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ.