ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸ್- ಟೆಂಪೋ ಮುಖಾಮುಖಿ ಡಿಕ್ಕಿ: ಒಬ್ಬರು ಸ್ಥಳದಲ್ಲೇ ಸಾವು, ನಾಲ್ವರಿಗೆ ತೀವ್ರ ಗಾಯ

Last Updated 28 ಜೂನ್ 2022, 2:36 IST
ಅಕ್ಷರ ಗಾತ್ರ

ಬಿಳಿಕೆರೆ (ಮೈಸೂರು): ಹೋಬಳಿಯ ಮಲ್ಲಿನಾಥಪುರದ ಬಳಿ ಮೈಸೂರು-ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ಕೆಎಸ್ಆರ್‌ಟಿಸಿ ಬಸ್ ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಬನ್ನಿಕುಪ್ಪೆ ಗ್ರಾಮದ ನಾಗಯ್ಯ ಮೃತ. ಹನಗೋಡು ಹೋಬಳಿಯ ತಟ್ಟೆಕೆರೆ ಗ್ರಾಮದ ಮಂಗಳಮ್ಮ, ಅರಸು ಕಲ್ಲಹಳ್ಳಿಯ ಶೇಖರ್, ಧರ್ಮಪುರದ ಕೆಂಡಗಣ್ಣಮ್ಮ, ಮಂಟಿಕೊಪ್ಪಲು ಜಯಮ್ಮ ಅವರು ತೀವ್ರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಳಿಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ತೆರವುಗೊಳಿಸಿ, ರಸ್ತೆ ಸಂಚಾರಕ್ಕೆ ಅನುವು ಮಾಡಿದರು. ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT