<p><strong>ಮೈಸೂರು</strong>: ನಗರದ ಗದ್ದಿಗೆ ಮುಖ್ಯ ರಸ್ತೆಯಲ್ಲಿ ಬುಧವಾರ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿಯ ಕಾಲಿನ ಮೇಲೆ, ಬಸ್ನ ಚಕ್ರ ಹರಿದು ಗಾಯಗೊಂಡಿದ್ದಾನೆ.</p>.<p>ಮಹಾರಾಜ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿ ಕಿರಣ್ ಗಾಯಗೊಂಡಾತ.</p>.<p>ಕಾಲೇಜಿಗೆ ಹೋಗುವುದಕ್ಕಾಗಿ ಈತ ಬಸ್ ಹತ್ತಲು ಮುಂದಾಗಿದ್ದಾನೆ. ಈ ವೇಳೆ ಬಸ್ ಏಕಾಏಕಿ ಚಲಿಸಿದ್ದು ಕಿರಣ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ನ ಹಿಂಬದಿಯ ಚಕ್ರ ಈತನ ಕಾಲಿನ ಮೇಲೆ ಹರಿದಿದೆ.</p>.<p>ಘಟನೆಗೆ ಸ್ಥಳದಲ್ಲಿಯೇ ವಿದ್ಯಾರ್ಥಿಗಳು ಬಸ್ ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪರಿಹಾರಕ್ಕಾಗಿ ಆಗ್ರಹಿಸಿದರು. ವಿಷಯ ತಿಳಿದೊಡನೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರು. ಕೆ.ಆರ್. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕೆಎಸ್ಆರ್ಟಿಸಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದೆ.</p>.<p class="Briefhead"><strong>₹ 31 ಲಕ್ಷ ವಂಚನೆ: ದೂರು</strong><br />ನಗರದಲ್ಲಿರುವ ಚೋಳಮಂಡಲಮ್ ಇನ್ವೆಸ್ಟ್ಮೆಂಟ್ ಪ್ರೈವೇಟ್ ಅಂಡ್ ಫೈನಾನ್ಸ್ ಕಂಪನಿ ಪರವಾಗಿ, ಗ್ರಾಹಕರಿಂದ ನಿತ್ಯ ಹಣವನ್ನು ಸಂಗ್ರಹಿಸುತ್ತಿದ್ದ ಸೋಮೇಶ್ ಎಂಬಾತ, ₹ 30,96,901 ನಗದನ್ನು ವಿವಿಧ ಬ್ಯಾಂಕ್ಗಳಿಗೆ ಜಮಾ ಮಾಡದೆ ನಾಪತ್ತೆಯಾಗಿದ್ದಾನೆ ಎಂದು ಕಂಪನಿಯ ಮ್ಯಾನೇಜರ್ ರಮೇಶ್ ಬಾಬು ಎಂಬುವರು ಠಾಣೆಗೆ ದೂರು ನೀಡಿದ್ದಾರೆ ಎಂದು ದೇವರಾಜ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ನಗರದ ಗದ್ದಿಗೆ ಮುಖ್ಯ ರಸ್ತೆಯಲ್ಲಿ ಬುಧವಾರ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿಯ ಕಾಲಿನ ಮೇಲೆ, ಬಸ್ನ ಚಕ್ರ ಹರಿದು ಗಾಯಗೊಂಡಿದ್ದಾನೆ.</p>.<p>ಮಹಾರಾಜ ಕಾಲೇಜಿನ ಬಿ.ಕಾಂ. ವಿದ್ಯಾರ್ಥಿ ಕಿರಣ್ ಗಾಯಗೊಂಡಾತ.</p>.<p>ಕಾಲೇಜಿಗೆ ಹೋಗುವುದಕ್ಕಾಗಿ ಈತ ಬಸ್ ಹತ್ತಲು ಮುಂದಾಗಿದ್ದಾನೆ. ಈ ವೇಳೆ ಬಸ್ ಏಕಾಏಕಿ ಚಲಿಸಿದ್ದು ಕಿರಣ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಬಸ್ನ ಹಿಂಬದಿಯ ಚಕ್ರ ಈತನ ಕಾಲಿನ ಮೇಲೆ ಹರಿದಿದೆ.</p>.<p>ಘಟನೆಗೆ ಸ್ಥಳದಲ್ಲಿಯೇ ವಿದ್ಯಾರ್ಥಿಗಳು ಬಸ್ ತಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಪರಿಹಾರಕ್ಕಾಗಿ ಆಗ್ರಹಿಸಿದರು. ವಿಷಯ ತಿಳಿದೊಡನೆ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದರು. ಕೆ.ಆರ್. ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<p>ಕೆಎಸ್ಆರ್ಟಿಸಿ ಗಾಯಾಳುವಿಗೆ ಚಿಕಿತ್ಸೆ ಕೊಡಿಸಿದೆ.</p>.<p class="Briefhead"><strong>₹ 31 ಲಕ್ಷ ವಂಚನೆ: ದೂರು</strong><br />ನಗರದಲ್ಲಿರುವ ಚೋಳಮಂಡಲಮ್ ಇನ್ವೆಸ್ಟ್ಮೆಂಟ್ ಪ್ರೈವೇಟ್ ಅಂಡ್ ಫೈನಾನ್ಸ್ ಕಂಪನಿ ಪರವಾಗಿ, ಗ್ರಾಹಕರಿಂದ ನಿತ್ಯ ಹಣವನ್ನು ಸಂಗ್ರಹಿಸುತ್ತಿದ್ದ ಸೋಮೇಶ್ ಎಂಬಾತ, ₹ 30,96,901 ನಗದನ್ನು ವಿವಿಧ ಬ್ಯಾಂಕ್ಗಳಿಗೆ ಜಮಾ ಮಾಡದೆ ನಾಪತ್ತೆಯಾಗಿದ್ದಾನೆ ಎಂದು ಕಂಪನಿಯ ಮ್ಯಾನೇಜರ್ ರಮೇಶ್ ಬಾಬು ಎಂಬುವರು ಠಾಣೆಗೆ ದೂರು ನೀಡಿದ್ದಾರೆ ಎಂದು ದೇವರಾಜ ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>