₹ 31 ಲಕ್ಷ ವಂಚನೆ: ದೂರು
ನಗರದಲ್ಲಿರುವ ಚೋಳಮಂಡಲಮ್ ಇನ್ವೆಸ್ಟ್ಮೆಂಟ್ ಪ್ರೈವೇಟ್ ಅಂಡ್ ಫೈನಾನ್ಸ್ ಕಂಪನಿ ಪರವಾಗಿ, ಗ್ರಾಹಕರಿಂದ ನಿತ್ಯ ಹಣವನ್ನು ಸಂಗ್ರಹಿಸುತ್ತಿದ್ದ ಸೋಮೇಶ್ ಎಂಬಾತ, ₹ 30,96,901 ನಗದನ್ನು ವಿವಿಧ ಬ್ಯಾಂಕ್ಗಳಿಗೆ ಜಮಾ ಮಾಡದೆ ನಾಪತ್ತೆಯಾಗಿದ್ದಾನೆ ಎಂದು ಕಂಪನಿಯ ಮ್ಯಾನೇಜರ್ ರಮೇಶ್ ಬಾಬು ಎಂಬುವರು ಠಾಣೆಗೆ ದೂರು ನೀಡಿದ್ದಾರೆ ಎಂದು ದೇವರಾಜ ಪೊಲೀಸರು ತಿಳಿಸಿದ್ದಾರೆ.