ಮೈಸೂರು: ಕೋವಿಡ್–19 ದೃಢಪಟ್ಟ ವ್ಯಕ್ತಿಯ ಗುರುತು ಬಹಿರಂಗಪಡಿಸಿದ ಇಲ್ಲಿನ ಕೆ.ಆರ್.ಆಸ್ಪತ್ರೆಯ ಒಬ್ಬ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದ್ದು, ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ನೊಬ್ಬನನ್ನು ಕೆಲಸದಿಂದ ವಜಾ ಮಾಡಲಾಗಿದೆ.
ದುಬೈನಿಂದ ಮೈಸೂರಿಗೆ ಬಂದಿದ್ದ ವ್ಯಕ್ತಿಗೆ ಕೋವಿಡ್–19 ಇರುವುದು ಶನಿವಾರ ದೃಢಪಟ್ಟಿತ್ತು. ಆ ವ್ಯಕ್ತಿಯ ಹೆಸರು, ವಿಳಾಸ ಒಳಗೊಂಡಂತೆ ವೈದ್ಯಕೀಯ ಪರೀಕ್ಷೆಯ ವರದಿಯನ್ನು ವಾಟ್ಸ್ಆ್ಯಪ್ನಲ್ಲಿ ಬಹಿರಂಗಪಡಿಸಲಾಗಿತ್ತು.
‘ಇಬ್ಬರ ವಿರುದ್ಧವೂ ಪೊಲೀಸರಿಗೆ ದೂರು ನೀಡುವಂತೆ ಕೆ.ಆರ್.ಆಸ್ಪತ್ರೆಯ ಡೀನ್ಗೆ ಸೂಚಿಸಲಾಗಿತ್ತು. ಅವರು ನೀಡಿದ ದೂರಿನಂತೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.