<p><strong>ಮೈಸೂರು</strong>: ‘ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಶನಿವಾರ ಸಭೆ ನಡೆಸಿ, ರಾಜ್ಯದಲ್ಲೂ ಈ ಅಧಿಸೂಚನೆ ಜಾರಿಗೊಳಿಸಲು ಕ್ರಮ ವಹಿಸಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.</p>.<p>ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಮೈಸೂರು, ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಮುಖಂಡರು ಹಾಗೂ ವಿವಿಧ ಗ್ರಾಮದ ಯಜಮಾನರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಸಚಿವರು ಈ ಭರವಸೆ ನೀಡಿದರು.</p>.<p>ಪರಿಶಿಷ್ಟ ಜಾತಿ, ಪಂಗಡ ಸಮುದಾಯದ ರೈತರು ಕೃಷಿ ಚಟುವಟಿಕೆಗಳಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ರಮೇಶ ಜಾರಕಿಹೊಳಿ ಇದೇ ಸಂದರ್ಭ ಸಲಹೆ ನೀಡಿದರು.</p>.<p>‘ಜಿಲ್ಲೆಯಲ್ಲಿ ಮಹಾರಾಜರ ಕಾಲದಿಂದಲೂ ಇರುವ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಜನರಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಸೂಕ್ತ ವ್ಯವಸ್ಥೆ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಶನಿವಾರ ಸಭೆ ನಡೆಸಿ, ರಾಜ್ಯದಲ್ಲೂ ಈ ಅಧಿಸೂಚನೆ ಜಾರಿಗೊಳಿಸಲು ಕ್ರಮ ವಹಿಸಲಾಗುವುದು’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.</p>.<p>ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಗುರುವಾರ ಮೈಸೂರು, ಚಾಮರಾಜನಗರ ಜಿಲ್ಲೆಯ ನಾಯಕ ಸಮಾಜದ ಮುಖಂಡರು ಹಾಗೂ ವಿವಿಧ ಗ್ರಾಮದ ಯಜಮಾನರೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಸಚಿವರು ಈ ಭರವಸೆ ನೀಡಿದರು.</p>.<p>ಪರಿಶಿಷ್ಟ ಜಾತಿ, ಪಂಗಡ ಸಮುದಾಯದ ರೈತರು ಕೃಷಿ ಚಟುವಟಿಕೆಗಳಿಗೆ ಸರ್ಕಾರದಿಂದ ದೊರಕುವ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ರಮೇಶ ಜಾರಕಿಹೊಳಿ ಇದೇ ಸಂದರ್ಭ ಸಲಹೆ ನೀಡಿದರು.</p>.<p>‘ಜಿಲ್ಲೆಯಲ್ಲಿ ಮಹಾರಾಜರ ಕಾಲದಿಂದಲೂ ಇರುವ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಕೃಷಿ ಚಟುವಟಿಕೆ ನಡೆಸಲು ಅನುಕೂಲವಾಗುವಂತೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು. ಜನರಿಗೆ ಕುಡಿಯುವ ನೀರಿಗೆ ತೊಂದರೆ ಉಂಟಾಗದಂತೆ ಸೂಕ್ತ ವ್ಯವಸ್ಥೆ ರೂಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಸಂಸದ ಪ್ರತಾಪ ಸಿಂಹ, ವಿಧಾನ ಪರಿಷತ್ನ ಮಾಜಿ ಸದಸ್ಯ ಸಿದ್ದರಾಜು ಹಾಗೂ ಸಮಾಜದ ಮುಖಂಡರು ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>