ಮೈಸೂರು: ಪಿರಿಯಾಪಟ್ಟಣದ ರಾಣಿಗೇಟ್ ಹಾಡಿಯ ಆದಿವಾಸಿ ಸಮುದಾಯಕ್ಕೆ ಸೇರಿದ ಬಸವ ಎಂಬುವವರು ಬಹಿರ್ದೆಸೆಗೆ ಹೋಗಿದ್ದಾಗ ಅರಣ್ಯ ಇಲಾಖೆಯ ವಾಚರ್ ಸುಬ್ರಹ್ಮಣ್ಯ ಎಂಬುವವರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಬಸವ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಗಾಯಗೊಂಡಿರುವ ಬಸವ ಅವರ ಮೇಲೆಯೆ ಪ್ರಕರಣ ದಾಖಲಿಸಿದ್ದು, ಪ್ರತಿದೂರನ್ನು ಸ್ವೀಕರಿಸುತ್ತಿಲ್ಲ ಎಂದು ನಟ ಚೇತನ್ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಗುರುವಾರ ಆಕ್ರೋಶ ವ್ಯಕ್ತಪಡಿಸಿದರು.
ಆದಿವಾಸಿಗಳ ಮೇಲಿನ ದೌರ್ಜನ್ಯ ನಿಲ್ಲಬೇಕು. ಅವರಿಗೆ ನ್ಯಾಯ ಸಿಗಬೇಕು. ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.