ಮಂಡ್ಯ ಜಿಲ್ಲಾ ಯುವ ಬರಹಗಾರರ ಬಳಗದ ಅಧ್ಯಕ್ಷ ಟಿ.ಸತೀಶ್ ಜವರೇಗೌಡ ಮಾತನಾಡಿ, ‘ಸಾಹಿತ್ಯ, ಸಂಸ್ಕೃತಿ, ಸಂಗೀತ, ರಂಗಭೂಮಿ ಕ್ಷೇತ್ರದ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸುವುದರಿಂದ ಸದಭಿರುಚಿ ಬೆಳೆದು ಉತ್ತಮ ಸಂಸ್ಕಾರ ದೊರೆಯುತ್ತದೆ. ಅವರ ವ್ಯಕ್ತಿತ್ವ ವಿಕಾಸವಾಗುತ್ತದೆ. ಶ್ರೇಷ್ಠ ನಾಗರಿಕರಾಗಿ ಹೊರ ಹೊಮ್ಮುತ್ತಾರೆ’ ಎಂದು ತಿಳಿಸಿದರು.