<p><strong>ಮೈಸೂರು:</strong> ಬಿಜೆಪಿಗೆ ಹೊರಗಿನಿಂದ ಬಂದ 17 ಮಂದಿಯ ತ್ಯಾಗದಿಂದಲೇ ತಾವು ಸಚಿವರಾಗಿರುವುದು ಎಂಬುದನ್ನು ಕೆ.ಎಸ್.ಈಶ್ವರಪ್ಪ ಮರೆಯಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>ಇಲ್ಲಿನ ಸುತ್ತೂರು ಮಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಹೊರಗಿನಿಂದ ಬಂದ 17 ಮಂದಿಯಿಂದ ಬಿಜೆಪಿಯಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಈಶ್ವರಪ್ಪ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅವರು ಆ ರೀತಿ ಹೇಳಿದ್ದರೆ, ಈ 17 ಮಂದಿಯಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ ಎನ್ನುವ ಸಂಗತಿಯನ್ನು ಮರೆಯಬಾರದು ಎಂದು ಅವರು ಹೇಳಿದರು.</p>.<p>ನಾಯಕತ್ವ ಬದಲಾವಣೆ ಎನ್ನುವುದು ಪಕ್ಷದ ಚೌಕಟ್ಟಿನಲ್ಲಿ ಚರ್ಚೆಯಾಗಬೇಕೇ ವಿನಹಾ ಹೊರಗಡೆ ಅಲ್ಲ. ಬಹಿರಂಗವಾಗಿ ಈ ಕುರಿತು ಯಾರೂ ಮಾತನಾಡಬಾರದು ಎಂದು ಸೂಚನೆ ನೀಡಲು ಅರುಣ್ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ. ಇವರು ಬಂದ ನಂತರ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಾಯಕತ್ವ ಬದಲಾವಣೆ ಕುರಿತು ಕೆಲವರಷ್ಟೇ ಮಾತನಾಡುತ್ತಿದ್ದಾರೆ. ಈಗಾಗಲೇ ಹೈಕಮಾಂಡ್ ಇನ್ನೂ 2 ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದೆ. ಈ ಕುರಿತು ಯಾವುದೇ ಅನುಮಾನ ಬೇಡ.ಮುನಿರತ್ನ ಅವರು ಸಚಿವರಾಗಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದರು.</p>.<p>ಬೇಸಿಗೆ ಸಂದರ್ಭದಲ್ಲಿ ಹೂ, ಹಣ್ಣು ಬೆಳೆಗಾರರಿಗೆ ತೊಂದರೆಯಾಗಿದ್ದು ಬಿಟ್ಟರೆ ಕೊರೊನಾ 2ನೇ ಅಲೆಯು ಕೃಷಿ ಮೇಲೆ ಹಿಂದಿನ ವರ್ಷದಷ್ಟು ಮಾರಕ ಪರಿಣಾಮ ಬೀರಿಲ್ಲ. ಎಲ್ಲೆಡೆ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು ಸಮರ್ಪಕವಾಗಿದೆ. ಈ ಕುರಿತು ಎಲ್ಲ ಜಿಲ್ಲೆಗಳಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಬಿಜೆಪಿಗೆ ಹೊರಗಿನಿಂದ ಬಂದ 17 ಮಂದಿಯ ತ್ಯಾಗದಿಂದಲೇ ತಾವು ಸಚಿವರಾಗಿರುವುದು ಎಂಬುದನ್ನು ಕೆ.ಎಸ್.ಈಶ್ವರಪ್ಪ ಮರೆಯಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿಳಿಸಿದರು.</p>.<p>ಇಲ್ಲಿನ ಸುತ್ತೂರು ಮಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಹೊರಗಿನಿಂದ ಬಂದ 17 ಮಂದಿಯಿಂದ ಬಿಜೆಪಿಯಲ್ಲಿ ಗೊಂದಲ ಸೃಷ್ಟಿಯಾಗುತ್ತಿದೆ ಎಂದು ಈಶ್ವರಪ್ಪ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ. ಒಂದು ವೇಳೆ ಅವರು ಆ ರೀತಿ ಹೇಳಿದ್ದರೆ, ಈ 17 ಮಂದಿಯಿಂದಲೇ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು, ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾರೆ ಎನ್ನುವ ಸಂಗತಿಯನ್ನು ಮರೆಯಬಾರದು ಎಂದು ಅವರು ಹೇಳಿದರು.</p>.<p>ನಾಯಕತ್ವ ಬದಲಾವಣೆ ಎನ್ನುವುದು ಪಕ್ಷದ ಚೌಕಟ್ಟಿನಲ್ಲಿ ಚರ್ಚೆಯಾಗಬೇಕೇ ವಿನಹಾ ಹೊರಗಡೆ ಅಲ್ಲ. ಬಹಿರಂಗವಾಗಿ ಈ ಕುರಿತು ಯಾರೂ ಮಾತನಾಡಬಾರದು ಎಂದು ಸೂಚನೆ ನೀಡಲು ಅರುಣ್ಸಿಂಗ್ ರಾಜ್ಯಕ್ಕೆ ಬರುತ್ತಿದ್ದಾರೆ. ಇವರು ಬಂದ ನಂತರ ಎಲ್ಲ ಗೊಂದಲಗಳಿಗೆ ತೆರೆ ಬೀಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.</p>.<p>ನಾಯಕತ್ವ ಬದಲಾವಣೆ ಕುರಿತು ಕೆಲವರಷ್ಟೇ ಮಾತನಾಡುತ್ತಿದ್ದಾರೆ. ಈಗಾಗಲೇ ಹೈಕಮಾಂಡ್ ಇನ್ನೂ 2 ವರ್ಷಗಳ ಕಾಲ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಎಂದು ಹೇಳಿದೆ. ಈ ಕುರಿತು ಯಾವುದೇ ಅನುಮಾನ ಬೇಡ.ಮುನಿರತ್ನ ಅವರು ಸಚಿವರಾಗಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದರು.</p>.<p>ಬೇಸಿಗೆ ಸಂದರ್ಭದಲ್ಲಿ ಹೂ, ಹಣ್ಣು ಬೆಳೆಗಾರರಿಗೆ ತೊಂದರೆಯಾಗಿದ್ದು ಬಿಟ್ಟರೆ ಕೊರೊನಾ 2ನೇ ಅಲೆಯು ಕೃಷಿ ಮೇಲೆ ಹಿಂದಿನ ವರ್ಷದಷ್ಟು ಮಾರಕ ಪರಿಣಾಮ ಬೀರಿಲ್ಲ. ಎಲ್ಲೆಡೆ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು ಸಮರ್ಪಕವಾಗಿದೆ. ಈ ಕುರಿತು ಎಲ್ಲ ಜಿಲ್ಲೆಗಳಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>