ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಸಮಿತಿ ಸದಸ್ಯೆ ಪಿ.ಎಸ್.ಸಂಧ್ಯಾ ಮಾತನಾಡಿ, ‘ಸರ್ಕಾರ ನೀಡಿದ ಭರವಸೆಯಂತೆ ₹12 ಸಾವಿರ ಮಾಸಿಕ ವೇತನ ನೀಡಬೇಕು. ಬಾಕಿ ಇರುವ ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡಬೇಕು. ಈಗಾಗಲೇ ಘೋಷಿಸಿದ ₹3 ಸಾವಿರ ಕೋವಿಡ್ ಪ್ರೋತ್ಸಾಹಧನವನ್ನು ಇನ್ನೂ ತಲುಪದೇ ಇರುವ ಆಶಾಗಳಿಗೆ ಪಾವತಿಸಬೇಕು’ ಎಂದು ಆಗ್ರಹಿಸಿದರು.