ಬೆಳಗಾವಿ ಹೊರವಲಯದ ಗೌಂಡವಾಡ ಗ್ರಾಮದಲ್ಲಿ ನಡೆದ ಘರ್ಷಣೆ, ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಅದು ವೈಯಕ್ತಿಕ ಜಗಳದಿಂದಾಗಿರುವ ಕೊಲೆ. ಅದೊಂದು ಚಿಕ್ಕ ಗಲಾಟೆ. ಮೂರ್ನಾಲ್ಕು ವರ್ಷಗಳಿಂದ ದೇವಸ್ಥಾನದ ಜಾಗದ ವಿಚಾರದಲ್ಲಿ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಗಲಾಟೆ ನಡೆದಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ತಿಳಿಸಿದರು.