ಮೈಸೂರು: ನಗರದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ಎಐಟಿಯುಸಿ ಸಂಘಟನೆಯ 11ನೇ ರಾಜ್ಯ ಸಮ್ಮೇಳನದ ಅಂಗವಾಗಿ ನೂರಾರು ಕಾರ್ಯಕರ್ತರು ಭಾನುವಾರ ಬೃಹತ್ ರ್ಯಾಲಿ ನಡೆಸಿದರು.
ಪುರಭವನದಿಂದ ಆರಂಭವಾದ ರ್ಯಲಿ ಚಿಕ್ಕಗಡಿಯಾರ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಇರ್ವಿನ್ ರಸ್ತೆ , ಅಶೋಕ ರಸ್ತೆ ಮೂಲಕ ಪುರಭವನ ತಲುಪಿತು. ಕೆಂಪಂಗಿ ಹಾಗೂ ಕೆಂಪು ಸೀರೆಯುಟ್ಟ ನೂರಾರು ಕಾರ್ಯಕರ್ತರು ಕೆಂಬಾವುಟಗಳನ್ನಿಡಿದು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಎಐಟಿಯುಸಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಮರ್ ಜೀತ್ ಕೌರ್, ರಾಜ್ಯ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಭಾಗವಹಿಸಿದ್ದಾರೆ.