‘ಸಂಪತ್ತುಸೃಷ್ಟಿಸುವ ಶ್ರಮಿಕನನ್ನು, ಅನ್ನದಾತ ರೈತನನ್ನು ಗುಲಾಮಗಿರಿಗೆ ತಳ್ಳುವ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯ ವಿರುದ್ಧ ಎಲ್ಲರೂ ಒಂದಾಗಿ ಖಂಡಿಸಬೇಕು. ಈಗಾಗಲೇ ರೈತ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳು ಕೈ ಜೋಡಿಸಿವೆ. ಅಲ್ಲದೇ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವು ಇಲಾಖೆ, ಸಂಸ್ಥೆಗಳ ನೌಕರರು, ಗುತ್ತಿಗೆ ಕಾರ್ಮಿಕರು, ಬಿಸಿಯೂಟ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು, ಆಟೊ, ಟ್ಯಾಕ್ಸಿ ಚಾಲಕರು ಬೆಂಬಲ ವ್ಯಕ್ತಪಡಿಸುವುದಾಗಿ ಮುಂದೆ ಬಂದಿದ್ದಾರೆ’ ಎಂದರು.