‘ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಿಂದಾಗಿ ಈ ದೇಶದಲ್ಲಿ ನಮಗೆ ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಿದೆ. ಆರ್ಬಿಐ ಸ್ಥಾಪನೆಗೆ ಕಾರಣರಾಗಿ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿಕೊಟ್ಟರು. ಎಲ್ಲ ಧರ್ಮ, ಜಾತಿಯ ಜನರಿಗೆ ಶಿಕ್ಷಣ, ರಾಜಕೀಯ, ಉದ್ಯೋಗದ ಹಕ್ಕು ದೊರಕುವಂತೆ ಮಾಡಿ ಇಡೀ ವಿಶ್ವಕ್ಕೆ ಮಾದರಿಯಾಗಿದ್ದಾರೆ ಎಂದರು.