‘ಮತ್ತೊಂದು ಅತ್ಯಾಚಾರ’ ಎಂಬ ಸುದ್ದಿ ವ್ಯಾಪಕವಾಗಿ ಹರಡಿ ಆರ್.ಎಸ್.ನಾಯ್ಡು ನಗರದ ಸ್ಥಳೀಯರಲ್ಲಿ ಭೀತಿಯ ವಾತಾವರಣ ಮೂಡಿಸಿತು. ಸ್ಥಳಕ್ಕೆ ಕೂಡಲೇ ದೌಡಾಯಿಸಿದ ಶ್ವಾನದಳ, ಬೆರಳಚ್ಚು ತಜ್ಞರ ತಂಡ ಪರಿಶೀಲನೆ ನಡೆಸಿತು. ಡಿಸಿಪಿ ಪ್ರದೀಪ್ ಗುಂಟಿ, ಗೀತಾ ಪ್ರಸನ್ನ, ಎನ್.ಆರ್.ಎಸಿಪಿ ಶಿವಶಂಕರ್, ಎನ್.ಆರ್.ಠಾಣೆ ಇನ್ಸ್ಪೆಕ್ಟರ್ ಅಜರುದ್ದೀನ್ ಹಾಗೂ ಸಿಬ್ಬಂದಿ ಮಿಂಚಿನ ಕಾರ್ಯಾಚರಣೆ ಕೈಗೊಂಡರು. ಪ್ರದೇಶದಲ್ಲಿ ಜನರು ಗುಂಪಾಗಿ ಸೇರಿ ವೀಕ್ಷಿಸಿದರು. ಪೊಲೀಸರು ಕೇಳಿದ ಮಾಹಿತಿಯನ್ನು ನೀಡಿದರು.