ಮೈಸೂರು ವಿಶ್ವವಿದ್ಯಾಲಯ ವತಿಯಿಂದ ಏ.15 ಮತ್ತು 17ರಂದು ನಡೆಸಿದ ಬಿ.ಎಸ್ಸಿ ರಸಾಯನ ವಿಜ್ಞಾನದ ಪರೀಕ್ಷೆ ಬಳಿಕ ಉತ್ತರ ಪತ್ರಿಕೆಯನ್ನು ಅದಲು ಬದಲು ಮಾಡಲು ಮಹಾರಾಣಿ ಕಾಲೇಜಿನ ಸಿಬ್ಬಂದಿಯೊಬ್ಬರು ಕೆಲ ವಿದ್ಯಾರ್ಥಿಗಳೊಂದಿಗೆ ಸೇರಿ ಲಾಡ್ಜ್ವೊಂದರಲ್ಲಿ ಬೇರೆ ಉತ್ತರ ಪತ್ರಿಕೆ ಸಿದ್ಧಪಡಿಸುತ್ತಿದ್ದ ವೇಳೆ ಮಂಡಿ ಠಾಣೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳ ಮೇಲೆ ಪ್ರಕರಣ ದಾಖಲಿಸದ ಕುರಿತು ಮಂಡಿ ಠಾಣೆಯ ಇನ್ಸ್ಪೆಕ್ಟರ್ ಸೇರಿ ನಾಲ್ವರನ್ನು ಅಮಾನತುಗೊಳಿಸಿದ ನಗರ ಪೊಲೀಸ್ ಕಮಿಷನರ್ ಚಂದ್ರಗುಪ್ತ ಪ್ರಕರಣದ ವಿಚಾರಣೆಯನ್ನು ನಗರ ಅಪರಾಧ ಪತ್ತೆ ವಿಭಾಗಕ್ಕೆ ವಹಿಸಿದ್ದರು.