ಸಾನ್ನಿಧ್ಯ ವಹಿಸಿದ್ದ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿ, ‘ಸಾಮಾಜಿಕ ಮತ್ತು ಆಧ್ಯಾತ್ಮಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಈ ಬಗ್ಗೆ ಆರೋಗ್ಯ ಭಾರತಿ ಶ್ಲಾಘನೀಯ ಕೆಲಸ ಮಾಡುತ್ತಿದೆ. ನಮ್ಮ ಆಹಾರ, ನಿತ್ಯದ ಚಟುವಟಿಕೆಗಳು (ವ್ಯವಹಾರ), ಆಲೋಚನೆ (ವಿಚಾರ), ಸೇವೆ (ಸೇವಾ), ಸಾಧನಾ, ಸತ್ಸಂಗ ಸೇರಿದಂತೆ ಜೀವನದ ಎಲ್ಲಾ ಅಂಶಗಳು ಬಹಳ ಮುಖ್ಯವಾದವು. ಇವುಗಳ ಬಗ್ಗೆ ನಾವು ಜಾಗರೂಕರಾಗಿರಬೇಕು’ ಎಂದರು.