ಮುಂಬೈ: ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧ ಸೋತ ಪಂದ್ಯದ ನಂತರ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಸಹ ಮಾಲಕಿ ಪ್ರೀತಿ ಜಿಂಟಾ ಮತ್ತು ಸಲಹೆಗಾರ ವೀರೇಂದ್ರ ಸೆಹ್ವಾಗ್ ನಡುವೆ ವಾಗ್ವಾದ ನಡೆದಿದೆ ಎಂದು ವೆಬ್ಸೈಟ್ಗಳು ವರದಿ ಮಾಡಿವೆ. ಇದು ತಂಡದ ಜೊತೆ ಸೆಹ್ವಾಗ್ ಅವರ ಸಂಬಂಧಕ್ಕೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.