<p><strong>ಜಯಪುರ:</strong> ಕೊರೊನಾದಿಂದ ದುಡಿಯುವ ವರ್ಗಕ್ಕೆಬಹಳಷ್ಟು ತೊಂದರೆಯಾಗಿದ್ದು, ಜೀವನೋಪಾಯಕ್ಕಾಗಿ ಹಲವು ಮಾರ್ಗಗಳನ್ನು ಹಿಡಿಯುವಂತೆ ಮಾಡಿದೆ.ಮೈಸೂರು ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಕಲಾವಿದ ಲೋಕೇಶ್ ಅವರು ಕೃಷಿಯತ್ತ ಆಕರ್ಷಿತರಾಗಿ ಬದುಕು ಕಂಡುಕೊಳ್ಳುತ್ತಿದ್ದಾರೆ.</p>.<p>ಮಂಡ್ಯ ಜಿಲ್ಲೆ ಪಾಂಡವಪುರದ ವಿಜಯ ಕಾಲೇಜು, ಮೈಸೂರಿನ ವಿವಿಧ ಖಾಸಗಿ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹದಿನೈದು ವರ್ಷಗಳಿಂದಲೂ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಅಲಂಕಾರ ಮಾಡುವ ಕಲಾವಿದರೂ ಇವರೇ.</p>.<p>ಕೊರೊನಾ ಸಂಕಷ್ಟದಿಂದ ಶಾಲೆಗಳು ತೆರೆಯದೆ ಬಾಗಿಲು ಮುಚ್ಚಿವೆ. ಉದ್ಯೋಗವಿಲ್ಲದೇ ಸುಮ್ಮನಿರುವುದಕ್ಕಿಂತ ಮೂರು ಎಕರೆ ಸ್ವಂತ ಭೂಮಿಯಲ್ಲಿ ಕೃಷಿ ಮಾಡಲು ನಿರ್ಧರಿಸಿದರು.</p>.<p>‘ಜಯಪುರ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯ ಜಾಬ್ ಕಾರ್ಡ್ ಮಾಡಿಸಿಕೊಂಡೆ. ಯೋಜನೆಯಡಿ ಕೃಷಿ ಹೊಂಡ ತೆಗೆಸಿದೆ. ಉತ್ತಮ ಮಳೆಯಾದ್ದರಿಂದ ಕೃಷಿ ಹೊಂಡ ನೀರಿನಿಂದ ತುಂಬಿದ್ದು, ಜಮೀನಿನಲ್ಲಿ ತರಕಾರಿ ಮತ್ತು ತೋಟಗಾರಿಕೆ ಬೆಳೆ ಬೆಳೆಯಲು ನಿರ್ಧರಿಸಿದ್ದೇನೆ’ ಎಂದು ಲೋಕೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ಪಟ್ಟಣದಲ್ಲಿ ಜೀವನ ನಿರ್ವಹಣೆ ಮಾಡುವುದು ಕಷ್ಟವಾಯಿತು. ಕುಟುಂಬ ಸದಸ್ಯರನ್ನು ನೋಡಿಕೊಳ್ಳಲು ಕೃಷಿ ಮಾಡಲು ಮುಂದಾಗಿದ್ದೇನೆ. ಈ ಕ್ಷೇತ್ರದಲ್ಲಿಯೇ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ’ ಎಂದರು.</p>.<p>‘ನರೇಗಾದಡಿ ಕೃಷಿ ಹೊಂಡ ತೆಗೆಸಲು ಲೋಕೇಶ್ ಅವರಿಗೆ ಸಲಹೆ ನೀಡಿದೆ. ಕಲಾವಿದ ಲೋಕೇಶ್ ಕೃಷಿಯತ್ತ ಆಸಕ್ತಿ ವಹಿಸಿರುವುದು ಇತರೆ ರೈತರಿಗೆ ಸ್ಫೂರ್ತಿಯಾಗಿದೆ’ ಎಂದು ಪಿಡಿಒ ನರಹರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಯಪುರ:</strong> ಕೊರೊನಾದಿಂದ ದುಡಿಯುವ ವರ್ಗಕ್ಕೆಬಹಳಷ್ಟು ತೊಂದರೆಯಾಗಿದ್ದು, ಜೀವನೋಪಾಯಕ್ಕಾಗಿ ಹಲವು ಮಾರ್ಗಗಳನ್ನು ಹಿಡಿಯುವಂತೆ ಮಾಡಿದೆ.ಮೈಸೂರು ತಾಲ್ಲೂಕಿನ ಮಾವಿನಹಳ್ಳಿ ಗ್ರಾಮದ ಕಲಾವಿದ ಲೋಕೇಶ್ ಅವರು ಕೃಷಿಯತ್ತ ಆಕರ್ಷಿತರಾಗಿ ಬದುಕು ಕಂಡುಕೊಳ್ಳುತ್ತಿದ್ದಾರೆ.</p>.<p>ಮಂಡ್ಯ ಜಿಲ್ಲೆ ಪಾಂಡವಪುರದ ವಿಜಯ ಕಾಲೇಜು, ಮೈಸೂರಿನ ವಿವಿಧ ಖಾಸಗಿ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಲಾ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹದಿನೈದು ವರ್ಷಗಳಿಂದಲೂ ದಸರಾದಲ್ಲಿ ಪಾಲ್ಗೊಳ್ಳುವ ಆನೆಗಳಿಗೆ ಅಲಂಕಾರ ಮಾಡುವ ಕಲಾವಿದರೂ ಇವರೇ.</p>.<p>ಕೊರೊನಾ ಸಂಕಷ್ಟದಿಂದ ಶಾಲೆಗಳು ತೆರೆಯದೆ ಬಾಗಿಲು ಮುಚ್ಚಿವೆ. ಉದ್ಯೋಗವಿಲ್ಲದೇ ಸುಮ್ಮನಿರುವುದಕ್ಕಿಂತ ಮೂರು ಎಕರೆ ಸ್ವಂತ ಭೂಮಿಯಲ್ಲಿ ಕೃಷಿ ಮಾಡಲು ನಿರ್ಧರಿಸಿದರು.</p>.<p>‘ಜಯಪುರ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯ ಜಾಬ್ ಕಾರ್ಡ್ ಮಾಡಿಸಿಕೊಂಡೆ. ಯೋಜನೆಯಡಿ ಕೃಷಿ ಹೊಂಡ ತೆಗೆಸಿದೆ. ಉತ್ತಮ ಮಳೆಯಾದ್ದರಿಂದ ಕೃಷಿ ಹೊಂಡ ನೀರಿನಿಂದ ತುಂಬಿದ್ದು, ಜಮೀನಿನಲ್ಲಿ ತರಕಾರಿ ಮತ್ತು ತೋಟಗಾರಿಕೆ ಬೆಳೆ ಬೆಳೆಯಲು ನಿರ್ಧರಿಸಿದ್ದೇನೆ’ ಎಂದು ಲೋಕೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.</p>.<p>‘ಪಟ್ಟಣದಲ್ಲಿ ಜೀವನ ನಿರ್ವಹಣೆ ಮಾಡುವುದು ಕಷ್ಟವಾಯಿತು. ಕುಟುಂಬ ಸದಸ್ಯರನ್ನು ನೋಡಿಕೊಳ್ಳಲು ಕೃಷಿ ಮಾಡಲು ಮುಂದಾಗಿದ್ದೇನೆ. ಈ ಕ್ಷೇತ್ರದಲ್ಲಿಯೇ ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತೇನೆ’ ಎಂದರು.</p>.<p>‘ನರೇಗಾದಡಿ ಕೃಷಿ ಹೊಂಡ ತೆಗೆಸಲು ಲೋಕೇಶ್ ಅವರಿಗೆ ಸಲಹೆ ನೀಡಿದೆ. ಕಲಾವಿದ ಲೋಕೇಶ್ ಕೃಷಿಯತ್ತ ಆಸಕ್ತಿ ವಹಿಸಿರುವುದು ಇತರೆ ರೈತರಿಗೆ ಸ್ಫೂರ್ತಿಯಾಗಿದೆ’ ಎಂದು ಪಿಡಿಒ ನರಹರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>