‘ಜಯಪುರ ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಯೋಜನೆಯ ಜಾಬ್ ಕಾರ್ಡ್ ಮಾಡಿಸಿಕೊಂಡೆ. ಯೋಜನೆಯಡಿ ಕೃಷಿ ಹೊಂಡ ತೆಗೆಸಿದೆ. ಉತ್ತಮ ಮಳೆಯಾದ್ದರಿಂದ ಕೃಷಿ ಹೊಂಡ ನೀರಿನಿಂದ ತುಂಬಿದ್ದು, ಜಮೀನಿನಲ್ಲಿ ತರಕಾರಿ ಮತ್ತು ತೋಟಗಾರಿಕೆ ಬೆಳೆ ಬೆಳೆಯಲು ನಿರ್ಧರಿಸಿದ್ದೇನೆ’ ಎಂದು ಲೋಕೇಶ್ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.