<p>ಮೈಸೂರು: ಕಚೇರಿಗೆ ಬುಧವಾರ ಮುತ್ತಿಗೆ ಹಾಕಲು ಬಂದ ಆಶಾ ಕಾರ್ಯಕರ್ತೆಯರನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಶ್ಲಾಘಿಸಿದರು.</p>.<p>‘ಕಳೆದ 4 ತಿಂಗಳುಗಳಿಂದ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸಿದ್ದೀರಿ. ನಾನು ನಿಮಗೆ ಧನ್ಯವಾದ ಹೇಳುತ್ತೇನೆ’ ಎನ್ನುತ್ತಲೇ ಮಾತಿಗಿಳಿದ ಅವರು, ಆಶಾ ಕಾರ್ಯಕರ್ತೆಯರ ಮನವೊಲಿಸಲು ಯತ್ನಿಸಿದರು.</p>.<p>ಜಿಲ್ಲಾಡಳಿತದಿಂದ ಏನು ಬೇಕೋ ಆ ನೆರವನ್ನು ನೀಡಲು ಸಿದ್ಧ. ಆದರೆ, ಗೌರವಧನ ಏರಿಕೆ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು. ಮನವಿಪತ್ರವನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸರ್ಕಾರ ಮಾತುಕತೆಗೆ ಆಹ್ವಾನ ನೀಡಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನವನ್ನು ಕೈಬಿಟ್ಟರು. ಪ್ರತಿಭಟನೆಗಷ್ಟೇ ತಮ್ಮ ಹೋರಾಟ ಸೀಮಿತಗೊಳಿಸಿ ಮನೆಯತ್ತ ಹೆಜ್ಜೆ ಹಾಕಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯ ಸಲಹೆಗಾರರಾದ ಸಂಧ್ಯಾ, ‘ಸದ್ಯಕ್ಕೆ ಮಾತುಕತೆಗೆ ಮಾತ್ರವೇ ಸರ್ಕಾರ ಆಹ್ವಾನ ನೀಡಿದೆ. ಮಾತುಕತೆ ಫಲಪ್ರದವಾಗುವವರೆಗೂ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ’ ಎಂದು ತಿಳಿಸಿದರು.</p>.<p>ಎಐಯುಟಿಯುಸಿ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಶುಭಮಂಗಳಾ, ಕೋಮಲಾ ಹಾಗೂ ಇತರರು ಇದ್ದರು.</p>.<p class="Briefhead">ಅಂಬೇಡ್ಕರ್ ನಿವಾಸದ ಮೇಲಿನ ದಾಳಿಗೆ ಖಂಡನೆ</p>.<p>ಮೈಸೂರು: ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ಈಚೆಗೆ ನಡೆದ ದಾಳಿಯನ್ನು ಖಂಡಿಸಿ ರಾಜ್ಯ ದಲಿತ ಹೋರಾಟ ಸಮಿತಿಯ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಗೌರವಿಸುತ್ತದೆ. ಈಗ ಅವರ ನಿವಾಸದ ಮೇಲೆ ನಡೆದ ದಾಳಿಯಿಂದ ದೇಶವೇ ತಲೆತಗ್ಗಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ಅವರ ಪೌರತ್ವವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಎಂ.ಪರಮೇಶ, ನಂಜಪ್ಪ, ರಾಜಣ್ಣ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಕಚೇರಿಗೆ ಬುಧವಾರ ಮುತ್ತಿಗೆ ಹಾಕಲು ಬಂದ ಆಶಾ ಕಾರ್ಯಕರ್ತೆಯರನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಶ್ಲಾಘಿಸಿದರು.</p>.<p>‘ಕಳೆದ 4 ತಿಂಗಳುಗಳಿಂದ ಅತ್ಯುತ್ತಮವಾದ ಸೇವೆಯನ್ನು ಸಲ್ಲಿಸಿದ್ದೀರಿ. ನಾನು ನಿಮಗೆ ಧನ್ಯವಾದ ಹೇಳುತ್ತೇನೆ’ ಎನ್ನುತ್ತಲೇ ಮಾತಿಗಿಳಿದ ಅವರು, ಆಶಾ ಕಾರ್ಯಕರ್ತೆಯರ ಮನವೊಲಿಸಲು ಯತ್ನಿಸಿದರು.</p>.<p>ಜಿಲ್ಲಾಡಳಿತದಿಂದ ಏನು ಬೇಕೋ ಆ ನೆರವನ್ನು ನೀಡಲು ಸಿದ್ಧ. ಆದರೆ, ಗೌರವಧನ ಏರಿಕೆ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು. ಮನವಿಪತ್ರವನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.</p>.<p>ಸರ್ಕಾರ ಮಾತುಕತೆಗೆ ಆಹ್ವಾನ ನೀಡಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಯತ್ನವನ್ನು ಕೈಬಿಟ್ಟರು. ಪ್ರತಿಭಟನೆಗಷ್ಟೇ ತಮ್ಮ ಹೋರಾಟ ಸೀಮಿತಗೊಳಿಸಿ ಮನೆಯತ್ತ ಹೆಜ್ಜೆ ಹಾಕಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿಯ ಸಲಹೆಗಾರರಾದ ಸಂಧ್ಯಾ, ‘ಸದ್ಯಕ್ಕೆ ಮಾತುಕತೆಗೆ ಮಾತ್ರವೇ ಸರ್ಕಾರ ಆಹ್ವಾನ ನೀಡಿದೆ. ಮಾತುಕತೆ ಫಲಪ್ರದವಾಗುವವರೆಗೂ ಮುಷ್ಕರವನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ’ ಎಂದು ತಿಳಿಸಿದರು.</p>.<p>ಎಐಯುಟಿಯುಸಿ ಜಿಲ್ಲಾ ಘಟಕದ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಶುಭಮಂಗಳಾ, ಕೋಮಲಾ ಹಾಗೂ ಇತರರು ಇದ್ದರು.</p>.<p class="Briefhead">ಅಂಬೇಡ್ಕರ್ ನಿವಾಸದ ಮೇಲಿನ ದಾಳಿಗೆ ಖಂಡನೆ</p>.<p>ಮೈಸೂರು: ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ನಿವಾಸದ ಮೇಲೆ ಈಚೆಗೆ ನಡೆದ ದಾಳಿಯನ್ನು ಖಂಡಿಸಿ ರಾಜ್ಯ ದಲಿತ ಹೋರಾಟ ಸಮಿತಿಯ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿದರು.</p>.<p>ಅಂಬೇಡ್ಕರ್ ಅವರನ್ನು ಇಡೀ ವಿಶ್ವವೇ ಗೌರವಿಸುತ್ತದೆ. ಈಗ ಅವರ ನಿವಾಸದ ಮೇಲೆ ನಡೆದ ದಾಳಿಯಿಂದ ದೇಶವೇ ತಲೆತಗ್ಗಿಸುವಂತಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.</p>.<p>ಸರ್ಕಾರ ಕೂಡಲೇ ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಅವರಿಗೆ ಕಠಿಣ ಶಿಕ್ಷೆ ನೀಡಬೇಕು. ಅವರ ಪೌರತ್ವವನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಮುಖಂಡರಾದ ಎಂ.ಪರಮೇಶ, ನಂಜಪ್ಪ, ರಾಜಣ್ಣ ಹಾಗೂ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>