ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆಗೆ ಪ್ರೇರಣೆ ನೀಡಿದ ಆರೋಪಿಗಾಗಿ ಶೋಧ

Last Updated 26 ನವೆಂಬರ್ 2019, 9:48 IST
ಅಕ್ಷರ ಗಾತ್ರ

ಮೈಸೂರು: ಶಾಸಕ ತನ್ವೀರ್‌ಸೇಠ್‌ ಮೇಲೆ ನಡೆದ ಹಲ್ಲೆ ಪ್ರಕರಣ ಕುರಿತು ವಿಶೇಷ ತನಿಖಾ ತಂಡವು ಹಗಲಿರುಳೆನ್ನದೇ ತನಿಖೆ ನಡೆಸುತ್ತಿದೆ. ಇದರ ಹಿಂದಿರುವ ಸಂಘಟನೆಯ ಕುರಿತು ಸಾಕ್ಷ್ಯಗಳನ್ನು ಕಲೆ ಹಾಕುವಲ್ಲಿ ನಿರತವಾಗಿದೆ. ಜತೆಗೆ, ಹಲ್ಲೆ ನಡೆಸುವಂತೆ ಪ್ರೇರೇಪಿಸಿದ ಸಂಘಟನೆಯಲ್ಲಿನ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.

ಕೆಲ ವರ್ಷಗಳ ಹಿಂದೆ ಕ್ಯಾತಮಾರನಹಳ್ಳಿಯಲ್ಲಿ ನಡೆದ ರಾಜು ಹತ್ಯೆಯ ಆರೋಪಿಗಳಲ್ಲಿ ಕೆಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.

ಫರ್ಹಾನ್‌ಪಾಷಾ ಸಂಘಟನೆಯೊಂದು ನೇಮಕ ಮಾಡಿಕೊಂಡಿರುವ ಹೊಸ ತಲೆಮಾರಿನ ಯುವಕ. ಈತ ಈ ಹಿಂದೆ ಇಂತಹ ದುಷ್ಕೃತ್ಯಗಳಲ್ಲಿ ತೊಡಗಿರುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT