ಮೈಸೂರು: ಶಾಸಕ ತನ್ವೀರ್ಸೇಠ್ ಮೇಲೆ ನಡೆದ ಹಲ್ಲೆ ಪ್ರಕರಣ ಕುರಿತು ವಿಶೇಷ ತನಿಖಾ ತಂಡವು ಹಗಲಿರುಳೆನ್ನದೇ ತನಿಖೆ ನಡೆಸುತ್ತಿದೆ. ಇದರ ಹಿಂದಿರುವ ಸಂಘಟನೆಯ ಕುರಿತು ಸಾಕ್ಷ್ಯಗಳನ್ನು ಕಲೆ ಹಾಕುವಲ್ಲಿ ನಿರತವಾಗಿದೆ. ಜತೆಗೆ, ಹಲ್ಲೆ ನಡೆಸುವಂತೆ ಪ್ರೇರೇಪಿಸಿದ ಸಂಘಟನೆಯಲ್ಲಿನ ಪ್ರಮುಖ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಮೂಲಗಳು ತಿಳಿಸಿವೆ.