<p><strong>ಮೈಸೂರು: </strong>ರಾಜ್ಯದಲ್ಲಿ ಕೋವಿಡ್–19 ಪ್ರಕರಣ ಉಲ್ಭಣಗೊಳ್ಳುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಅಂಗವಾಗಿ ಮೈಸೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ಆಯುಷ್ ಔಷಧಿಗಳನ್ನು ಸಿಬ್ಬಂದಿಗೆ ವಿತರಿಸಲಾಯಿತು.</p>.<p>ಮೈಸೂರಿನ ಆಯುಷ್ ಇಲಾಖೆಯ ವೈದ್ಯರಾದ ಡಾ.ರಾಘವೇಂದ್ರ, ಡಾ.ಸ್ವರ್ಣಲತಾ ಅವರು ಮೈಸೂರು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಸೀತಾಲಕ್ಷ್ಮೀ ಮಾರ್ಗದರ್ಶನದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಸಿಬ್ಬಂದಿಗೆ ಔಷಧ ವಿತರಿಸಿದರು.</p>.<p>ಮಂಡಕಳ್ಳಿ ವಿಮಾನ ನಿಲ್ದಾಣ, ಇಲ್ಲಿನ ಗಡಿ ಭಾಗದ ಚೆಕ್ ಪೋಸ್ಟ್ (ಬಿ.ಆರ್.ಸಿ) ಮಟ್ಟದಲ್ಲಿ ಕೋವಿಡ್-19 ಸಂಬಂಧ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಇಲಾಖೆಯು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ಕೋವಿಡ್-19 ರೋಗ ನಿರೋಧಕ ಆಯುಷ್ ಔಷಧಿ ವಿತರಿಸುವುದರ ಜೊತೆಗೆ ಔಷಧಿಗಳ ಬಳಕೆಯ ಬಗ್ಗೆ ಸೂಕ್ತ ಮಾಹಿತಿ ನೀಡಿದರು.</p>.<p>ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರಾದ ಮಂಜುನಾಥ್ ಬಿ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ರಾಜ್ಯದಲ್ಲಿ ಕೋವಿಡ್–19 ಪ್ರಕರಣ ಉಲ್ಭಣಗೊಳ್ಳುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ, ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸಿಕೊಳ್ಳಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಅಂಗವಾಗಿ ಮೈಸೂರಿನ ನಗರ ಕೇಂದ್ರ ಗ್ರಂಥಾಲಯದಲ್ಲಿ ಗುರುವಾರ ಆಯುಷ್ ಔಷಧಿಗಳನ್ನು ಸಿಬ್ಬಂದಿಗೆ ವಿತರಿಸಲಾಯಿತು.</p>.<p>ಮೈಸೂರಿನ ಆಯುಷ್ ಇಲಾಖೆಯ ವೈದ್ಯರಾದ ಡಾ.ರಾಘವೇಂದ್ರ, ಡಾ.ಸ್ವರ್ಣಲತಾ ಅವರು ಮೈಸೂರು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಸೀತಾಲಕ್ಷ್ಮೀ ಮಾರ್ಗದರ್ಶನದಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯಗಳ ಸಿಬ್ಬಂದಿಗೆ ಔಷಧ ವಿತರಿಸಿದರು.</p>.<p>ಮಂಡಕಳ್ಳಿ ವಿಮಾನ ನಿಲ್ದಾಣ, ಇಲ್ಲಿನ ಗಡಿ ಭಾಗದ ಚೆಕ್ ಪೋಸ್ಟ್ (ಬಿ.ಆರ್.ಸಿ) ಮಟ್ಟದಲ್ಲಿ ಕೋವಿಡ್-19 ಸಂಬಂಧ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಲಯ ಇಲಾಖೆಯು ಸೇರಿದಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ಕೋವಿಡ್-19 ರೋಗ ನಿರೋಧಕ ಆಯುಷ್ ಔಷಧಿ ವಿತರಿಸುವುದರ ಜೊತೆಗೆ ಔಷಧಿಗಳ ಬಳಕೆಯ ಬಗ್ಗೆ ಸೂಕ್ತ ಮಾಹಿತಿ ನೀಡಿದರು.</p>.<p>ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪ ನಿರ್ದೇಶಕರಾದ ಮಂಜುನಾಥ್ ಬಿ. ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>