<p><strong>ಮೈಸೂರು: </strong>ವಿವಿಧ ನಿಗಮ–ಮಂಡಳಿಗೆ ಮಾಡಿರುವ ಅಧ್ಯಕ್ಷರ ನೇಮಕ ವಿಚಾರವಾಗಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.</p>.<p>‘ಚರ್ಚೆ ನಡೆಸದೇ, ಯೋಚನೆ ಮಾಡದೇ ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಗೊಂದಲ ಉಂಟು ಮಾಡಿದ್ದಾರೆ. ಸಮರ್ಪಕವಾಗಿ ನೇಮಕ ಮಾಡುವಲ್ಲಿ ಎಡವಿದ್ದಾರೆ. ಈ ಕುರಿತು ನನಗೆ ಅತೃಪ್ತಿ ಇದೆ. ಯಡಿಯೂರಪ್ಪ ಜೊತೆಯೂ ಮಾತನಾಡಿದ್ದೇನೆ. ಹಲವು ಕಾರ್ಯಕ್ರಮಗಳು ಇದ್ದ ಕಾರಣ ಆಮೇಲೆ ಚರ್ಚಿಸುವುದಾಗಿ ಹೇಳಿದ್ದಾರೆ’ ಎಂದು ಗುರುವಾರ ಇಲ್ಲಿ ತಿಳಿಸಿದರು.</p>.<p>‘ಯಡಿಯೂರಪ್ಪ ಅವರಸ್ಥಿತಿ ಈಗ ಮುಳ್ಳಿನ ಮೇಲೆ ಪಂಚೆ ಹಾಕಿದಂತಾಗಿದೆ. ಹಾದಿ ಕಠಿಣವಾಗಿದ್ದು, ಬಹಳ ಹುಷಾರಾಗಿ ಹೆಜ್ಜೆ ಇಡಬೇಕಿದೆ’ ಎಂದು ಕಿವಿಮಾತು ಹೇಳಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಅಧಿಕಾರವಿದ್ದರೂ ಬುದ್ಧಿವಂತಿಕೆ ಇರಲಿಲ್ಲ. ಹೀಗಾಗಿ, ಅಧಿಕಾರ ಕಳೆದುಕೊಳ್ಳುವುದರ ಜೊತೆಗೆ ತಾವೇ ಸೋತು ಹೋದರು. ಯಡಿಯೂರಪ್ಪ ಬುದ್ಧಿವಂತಿಕೆ ಉಪಯೋಗಿಸಬೇಕು, ತಾಳ್ಮೆಯಿಂದ ವರ್ತಿಸಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು, ‘ಯಾವಾಗ ವಿಸ್ತರಣೆ ಮಾಡುತ್ತಾರೆ ಎಂಬುದು ನನಗೆ ಮಾಹಿತಿ ಇಲ್ಲ. ಹೈಕಮಾಂಡ್ ಉಂಟು, ಯಡಿಯೂರಪ್ಪ ಉಂಟು. ಆದರೆ, ಬೇಗನೇ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, ‘ಈ ವಿಚಾರವನ್ನು ಅಧಿಕೃತವಾಗಿ ಹೇಳುವಷ್ಟು ಶಕ್ತಿ ನನಗಿಲ್ಲ. ಬದಲಾವಣೆ ಮಾಡುವ ವಿಚಾರವಾಗಿ ಹೈಕಮಾಂಡ್ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಬೇಕು’ ಎಂದರು.</p>.<p><strong>‘ಕಾಂಗ್ರೆಸ್ ನೈತಿಕವಾಗಿ ಹಾಳಾಗಿದೆ’</strong><br />‘ಕಾಂಗ್ರೆಸ್ ಸಂಪೂರ್ಣ ಕುಸಿದು ಹೋಗಿದ್ದು, ನೈತಿಕವಾಗಿ ಹಾಳಾಗಿದೆ. ತಿಹಾರ್ ಜೈಲಿನಲ್ಲಿದ್ದವರನ್ನು ಅಧ್ಯಕ್ಷರನ್ನಾಗಿ ಮಾಡಿ ವೋಟು ಕೊಡಿ ಎಂದರೆ ಯಾರು ನೀಡುತ್ತಾರೆ? ನೂರಾರು ವರ್ಷಗಳ ಇತಿಹಾಸ ಇರುವ ಈ ಪಕ್ಷವು ಯಾವ ಮುಖ ಹೊತ್ತುಕೊಂಡು ಜನರ ಬಳಿ ಹೋಗುತ್ತದೆ?ಇದರ ಲಾಭ ಬಿಜೆಪಿಗೆ ಸಿಗುತ್ತಿದೆ’ ಎಂದು ಶ್ರೀನಿವಾಸಪ್ರಸಾದ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ವಿವಿಧ ನಿಗಮ–ಮಂಡಳಿಗೆ ಮಾಡಿರುವ ಅಧ್ಯಕ್ಷರ ನೇಮಕ ವಿಚಾರವಾಗಿ, ಬಿಜೆಪಿ ಸಂಸದ ವಿ.ಶ್ರೀನಿವಾಸಪ್ರಸಾದ್ ಮತ್ತೊಮ್ಮೆ ಅಸಮಾಧಾನ ಹೊರಹಾಕಿದ್ದಾರೆ.</p>.<p>‘ಚರ್ಚೆ ನಡೆಸದೇ, ಯೋಚನೆ ಮಾಡದೇ ನೇಮಕ ಮಾಡುವ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಗೊಂದಲ ಉಂಟು ಮಾಡಿದ್ದಾರೆ. ಸಮರ್ಪಕವಾಗಿ ನೇಮಕ ಮಾಡುವಲ್ಲಿ ಎಡವಿದ್ದಾರೆ. ಈ ಕುರಿತು ನನಗೆ ಅತೃಪ್ತಿ ಇದೆ. ಯಡಿಯೂರಪ್ಪ ಜೊತೆಯೂ ಮಾತನಾಡಿದ್ದೇನೆ. ಹಲವು ಕಾರ್ಯಕ್ರಮಗಳು ಇದ್ದ ಕಾರಣ ಆಮೇಲೆ ಚರ್ಚಿಸುವುದಾಗಿ ಹೇಳಿದ್ದಾರೆ’ ಎಂದು ಗುರುವಾರ ಇಲ್ಲಿ ತಿಳಿಸಿದರು.</p>.<p>‘ಯಡಿಯೂರಪ್ಪ ಅವರಸ್ಥಿತಿ ಈಗ ಮುಳ್ಳಿನ ಮೇಲೆ ಪಂಚೆ ಹಾಕಿದಂತಾಗಿದೆ. ಹಾದಿ ಕಠಿಣವಾಗಿದ್ದು, ಬಹಳ ಹುಷಾರಾಗಿ ಹೆಜ್ಜೆ ಇಡಬೇಕಿದೆ’ ಎಂದು ಕಿವಿಮಾತು ಹೇಳಿದರು.</p>.<p>‘ಸಿದ್ದರಾಮಯ್ಯ ಅವರಿಗೆ ಅಧಿಕಾರವಿದ್ದರೂ ಬುದ್ಧಿವಂತಿಕೆ ಇರಲಿಲ್ಲ. ಹೀಗಾಗಿ, ಅಧಿಕಾರ ಕಳೆದುಕೊಳ್ಳುವುದರ ಜೊತೆಗೆ ತಾವೇ ಸೋತು ಹೋದರು. ಯಡಿಯೂರಪ್ಪ ಬುದ್ಧಿವಂತಿಕೆ ಉಪಯೋಗಿಸಬೇಕು, ತಾಳ್ಮೆಯಿಂದ ವರ್ತಿಸಬೇಕು’ ಎಂದು ಸಲಹೆ ನೀಡಿದರು.</p>.<p>ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು, ‘ಯಾವಾಗ ವಿಸ್ತರಣೆ ಮಾಡುತ್ತಾರೆ ಎಂಬುದು ನನಗೆ ಮಾಹಿತಿ ಇಲ್ಲ. ಹೈಕಮಾಂಡ್ ಉಂಟು, ಯಡಿಯೂರಪ್ಪ ಉಂಟು. ಆದರೆ, ಬೇಗನೇ ಈ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದು ಹೇಳಿದರು.</p>.<p>ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿ, ‘ಈ ವಿಚಾರವನ್ನು ಅಧಿಕೃತವಾಗಿ ಹೇಳುವಷ್ಟು ಶಕ್ತಿ ನನಗಿಲ್ಲ. ಬದಲಾವಣೆ ಮಾಡುವ ವಿಚಾರವಾಗಿ ಹೈಕಮಾಂಡ್ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳಬೇಕು’ ಎಂದರು.</p>.<p><strong>‘ಕಾಂಗ್ರೆಸ್ ನೈತಿಕವಾಗಿ ಹಾಳಾಗಿದೆ’</strong><br />‘ಕಾಂಗ್ರೆಸ್ ಸಂಪೂರ್ಣ ಕುಸಿದು ಹೋಗಿದ್ದು, ನೈತಿಕವಾಗಿ ಹಾಳಾಗಿದೆ. ತಿಹಾರ್ ಜೈಲಿನಲ್ಲಿದ್ದವರನ್ನು ಅಧ್ಯಕ್ಷರನ್ನಾಗಿ ಮಾಡಿ ವೋಟು ಕೊಡಿ ಎಂದರೆ ಯಾರು ನೀಡುತ್ತಾರೆ? ನೂರಾರು ವರ್ಷಗಳ ಇತಿಹಾಸ ಇರುವ ಈ ಪಕ್ಷವು ಯಾವ ಮುಖ ಹೊತ್ತುಕೊಂಡು ಜನರ ಬಳಿ ಹೋಗುತ್ತದೆ?ಇದರ ಲಾಭ ಬಿಜೆಪಿಗೆ ಸಿಗುತ್ತಿದೆ’ ಎಂದು ಶ್ರೀನಿವಾಸಪ್ರಸಾದ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>