<p><strong>ಮೈಸೂರು: </strong>ಮೂರು ಕೃಷಿ ಕಾಯ್ದೆ ರದ್ದುಗೊಳಿಸಿದ ನೈಜ ಕಾರಣವನ್ನು ದೇಶದ ಜನರಿಗೆ ತಿಳಿಸಿ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಶುಕ್ರವಾರ ಇಲ್ಲಿ ಆಗ್ರಹಿಸಿದರು.</p>.<p>ಚಳವಳಿಗೆ ಜಯ ಸಿಕ್ಕಿದೆ. ಇತಿಹಾಸ ಪುನರಾವರ್ತನೆಗೊಂಡಿದೆ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಕಿಸಾನ್ ಮೋಚಾ೯ ಹೋರಾಟ ಅಚಲ. ಜನ ವಿರೋಧಿ ನೀತಿ ವಿರುದ್ಧ ಮುಂದುವರೆಯಲಿದೆ ಎಂದು ಘೋಷಿಸಿದರು.</p>.<p>ಕನಿಷ್ಠ ಬೆಂಬಲ ಬೆಲೆಗೆ ಶಾಸನದ ಬೆಂಬಲ ನೀಡಬೇಕು. ವಿದ್ಯುತ್ ಮಸೂದೆ ವಾಪಸ್ ಪಡೆಯಬೇಕು, ರದ್ದುಗೊಳಿಸಿದ ಕಾಮಿ೯ಕ ಸಂಹಿತೆಯ ನಾಲ್ಕು ಕೋಡ್ ಗಳನ್ನು ವಾಪಸ್ ಕೊಡಬೇಕು ಎಂದು ಒತ್ತಾಯಿಸಿದರು.</p>.<p>ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಹ ಭೂ ಸುಧಾರಣೆ, ಎಪಿಎಂಸಿ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ನಾಗೇಂದ್ರ ಆಗ್ರಹಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/prime-minister-narendra-modi-addressing-the-nation-885075.html" target="_blank">ಮೂರೂ ಕೃಷಿ ಕಾಯ್ದೆಗಳು ರದ್ದು: ಪ್ರಧಾನಿ ನರೇಂದ್ರ ಮೋದಿ ಘೋಷಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮೂರು ಕೃಷಿ ಕಾಯ್ದೆ ರದ್ದುಗೊಳಿಸಿದ ನೈಜ ಕಾರಣವನ್ನು ದೇಶದ ಜನರಿಗೆ ತಿಳಿಸಿ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಶುಕ್ರವಾರ ಇಲ್ಲಿ ಆಗ್ರಹಿಸಿದರು.</p>.<p>ಚಳವಳಿಗೆ ಜಯ ಸಿಕ್ಕಿದೆ. ಇತಿಹಾಸ ಪುನರಾವರ್ತನೆಗೊಂಡಿದೆ ಎಂದು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ಕಿಸಾನ್ ಮೋಚಾ೯ ಹೋರಾಟ ಅಚಲ. ಜನ ವಿರೋಧಿ ನೀತಿ ವಿರುದ್ಧ ಮುಂದುವರೆಯಲಿದೆ ಎಂದು ಘೋಷಿಸಿದರು.</p>.<p>ಕನಿಷ್ಠ ಬೆಂಬಲ ಬೆಲೆಗೆ ಶಾಸನದ ಬೆಂಬಲ ನೀಡಬೇಕು. ವಿದ್ಯುತ್ ಮಸೂದೆ ವಾಪಸ್ ಪಡೆಯಬೇಕು, ರದ್ದುಗೊಳಿಸಿದ ಕಾಮಿ೯ಕ ಸಂಹಿತೆಯ ನಾಲ್ಕು ಕೋಡ್ ಗಳನ್ನು ವಾಪಸ್ ಕೊಡಬೇಕು ಎಂದು ಒತ್ತಾಯಿಸಿದರು.</p>.<p>ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಸಹ ಭೂ ಸುಧಾರಣೆ, ಎಪಿಎಂಸಿ, ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ನಾಗೇಂದ್ರ ಆಗ್ರಹಿಸಿದರು.</p>.<p><strong>ಇದನ್ನೂ ಓದಿ... <a href="https://www.prajavani.net/india-news/prime-minister-narendra-modi-addressing-the-nation-885075.html" target="_blank">ಮೂರೂ ಕೃಷಿ ಕಾಯ್ದೆಗಳು ರದ್ದು: ಪ್ರಧಾನಿ ನರೇಂದ್ರ ಮೋದಿ ಘೋಷಣೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>