ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಗಾನ ಸುಧೆಗೆ ತಲೆದೂಗಿದ ಪ್ರೇಕ್ಷಕರು

Last Updated 10 ಫೆಬ್ರುವರಿ 2020, 11:12 IST
ಅಕ್ಷರ ಗಾತ್ರ

ಮೈಸೂರು: ಸ್ವಾಮಿ ವಿವೇಕಾನಂದ ಯೂತ್‌ಮೂವ್‌ಮೆಂಟ್‌ನ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಭಾನುವಾರ ನಡೆದ ‘ಸ್ವರಾನುಭೂತಿ’ ಕಾರ್ಯಕ್ರಮದಲ್ಲಿ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಕಂಠಸಿರಿಗೆ ಪ್ರೇಕ್ಷಕ ವೃಂದ ತಲೆದೂಗಿತು.

ಇವರಿಗೆ ಗಾಯಕಿ ದಿವ್ಯಾ ರಾಘವನ್ ಹಲವು ಹಾಡುಗಳಿಗೆ ಸಾಥ್ ನೀಡಿದರು. ಹಳೆಯ ಹಾಡುಗಳ ರಸದೌತಣ ಸವಿದ ಸಭಿಕರು ಇಳಿಸಂಜೆಯಲ್ಲಿ ವಿಶೇಷಾನುಭೂತಿ ಪಡೆದರು.

‘ಕನ್ನಡ ನಾಡಿನ ಜೀವ ನದಿ ಕಾವೇರಿ’ ಹಾಡಿಗೆ ಪ್ರೇಕ್ಷಕ ವೃಂದ ತನ್ಮಯಗೊಂಡಿತು. ‘ನನ್ನ ಹಾಡು ನನ್ನದು ನನ್ನ ರಾಗ ನನ್ನದು’ ಹಾಡಿಗೆ ಪ್ರೇಕ್ಷಕರೂ ದನಿಗೂಡಿಸಿದರು. ‘ಈ ಭೂಮಿ ಬಣ್ಣದ ಬುಗುರಿ ಆ ಶಿವನೇ ಚಾಟಿ ಕಣೊ’ ಹಾಡನ್ನು ಪ್ರೇಕ್ಷಕರು ಮೌನವಾಗಿ ಆಲಿಸಿದರು. ಪ್ರತಿ ಹಾಡಿನ ನಂತರ ಭರಪೂರ ಕರತಾಡನಗಳು ಮೊಳಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT