‘ಕೋವಿಡ್ ಸಮಸ್ಯೆ ನಡುವೆ ಕೆಲಸ ಮಾಡುತ್ತಿರುವ ಮಾಧ್ಯಮದವರು, ಪೊಲೀಸರ ಮೇಲೆ ಹಲ್ಲೆ ನಡೆಸಿದ ಕೃತ್ಯವನ್ನು ಸಹಿಸಲಾಗದು. ಈ ವಿಚಾರದಲ್ಲಿ ಯಾರೇ ತಪ್ಪು ಎಸಗಿದ್ದರೂ ಅಂತಹವರನ್ನು ಬಂಧಿಸಿ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿದ್ದಾರೆ.