ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೌರಿಕ ಆತ್ಮಹತ್ಯೆ

Last Updated 10 ಅಕ್ಟೋಬರ್ 2020, 2:09 IST
ಅಕ್ಷರ ಗಾತ್ರ

ಪಿರಿಯಾಪಟ್ಟಣ (ಮೈಸೂರು): ಕ್ಷೌರಿಕ ವೃತ್ತಿ ನಡೆಸುತ್ತಿದ್ದ, ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಯೋಗೇಶ್ (28) ಎಂಬುವವರು ಕಲ್ಲು ಕ್ವಾರಿಯ ಗುಂಡಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಗ್ರಾಮದಲ್ಲಿ ಸಲೂನ್ ನಡೆಸುತ್ತಿದ್ದ ಅವರು, ಖಾಸಗಿ ಹಣಕಾಸು ಸಂಸ್ಥೆಗಳಿಂದ ಹಾಗೂ ಹಲವರಿಂದ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲ ತೀರಿಸಲು ಆಗದೇ ನೊಂದಿದ್ದ ಅವರು, ಗುರುವಾರ ಸಂಜೆ ಪಂಚವಳ್ಳಿ ಗ್ರಾಮದ ಖಾಸಗಿ ಜಮೀನಿನಲ್ಲಿರುವ ಕಲ್ಲು ಕ್ವಾರಿಯ ಹಳ್ಳಕ್ಕೆ ನೆಗೆದಿದ್ದಾರೆ.

ವಿಷಯ ತಿಳಿದ ಪೊಲೀಸರು ಮತ್ತು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಗುರುವಾರ ತಡರಾತ್ರಿಯವರೆಗೂ ಕ್ವಾರಿಯಲ್ಲಿ ಹುಡುಕಾಟ ನಡೆಸಿದ್ದರು. ಶುಕ್ರವಾರ ಮುಂಜಾನೆ ಮುಳುಗು ತಜ್ಞರು ಶೋಧ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಮೃತನ ಅಣ್ಣ ಮಲ್ಲೇಶ್, ಪಿರಿಯಾಪಟ್ಟಣ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT