‘ಮೂರ್ತಿ ಪ್ರತಿಷ್ಠಾಪನೆ, ಶ್ರೀಮಂತ ಬಂಡವಾಳಗಾರರ ಸಾಲ ಮನ್ನಾ, ರಿಯಾಯಿತಿ, ಶಾಸಕ-ಸಂಸದರಿಗೆ ಸೌಲಭ್ಯ ಹೆಚ್ಚಿಸಲು ಜನರ ತೆರಿಗೆಯ ಹಣವನ್ನು ಬೇಕಾಬಿಟ್ಟಿ ಬಳಸುವ ಸರ್ಕಾರ ಅಗತ್ಯ ನೇಮಕಾತಿ ತಡೆ ಹಿಡಿಯುತ್ತಿರುವುದು ತಮ್ಮೊಳಗಿನ ಪ್ರಾದೇಶಿಕ ಅಸಮಾನತೆಯನ್ನು ಬಹಿರಂಗ ಪಡಿಸಿಕೊಂಡಿದೆ. ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಸಮಾನತೆಯ ದೃಷ್ಟಿಯಿಂದ ಕಲ್ಯಾಣ ಕರ್ನಾಟಕದ ಹುದ್ದೆಗಳ ನೇಮಕಾತಿ ಹಾಗೂ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಯ ಅಗತ್ಯವಿದೆ’ ಎಂದು ಪ್ರತಿಪಾದಿಸಿದೆ.